Advertisement

ಶಬರಿಮಲೆ; ನ್ಯೂಯಾರ್ಕ್ ಟೈಮ್ಸ್ ಪತ್ರಕರ್ತೆಯನ್ನು ಕೆಳಗಟ್ಟಿದ ಭಕ್ತರು

11:52 AM Oct 18, 2018 | Team Udayavani |

ತಿರುವನಂತಪುರಂ:ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೇ ಗುರುವಾರ ಬೆಳಗ್ಗೆ ನ್ಯೂಯಾರ್ಕ್ ಟೈಮ್ಸ್ ನ ಮಹಿಳಾ ಪತ್ರಕರ್ತೆ ಶಬರಿಮಲೆ ಪ್ರವೇಶಿಸಲು ಬೆಟ್ಟ ಹತ್ತಲು ಶುರು ಮಾಡಿದ್ದು, ಈ ಸಂದರ್ಭದಲ್ಲಿ ಭಾರೀ ವಿರೋಧ, ಪ್ರತಿಭಟನೆ ವ್ಯಕ್ತವಾಗಿದ್ದು, ಇಬ್ಬರನ್ನೂ ಬಲವಂತವಾಗಿ ವಾಪಸ್ ಕಳುಹಿಸಿರುವ ಘಟನೆ ನಡೆದಿದೆ.

Advertisement

ನ್ಯೂಯಾರ್ಕ್ ಟೈಮ್ಸ್ ನ ಭಾರತದ ಪ್ರತಿನಿಧಿ ದೆಹಲಿ ಮೂಲದ ಸುಹಾಸಿನಿ ರಾಜ್ ಮತ್ತು ಆಕೆಯ ಸಹೋದ್ಯೋಗಿ(ವಿದೇಶಿ ಪತ್ರಕರ್ತ) ಪಂಪಾ ದಾರಿಯನ್ನು ದಾಟುವಲ್ಲಿ ಯಶಸ್ವಿಯಾಗಿದ್ದರು. ಏತನ್ಮಧ್ಯೆ ಶಬರಿಮಲೆ ದೇಗುಲ ಸೇರುವ ಮುನ್ನ ಸಿಗುವ ಬೆಟ್ಟ ಹತ್ತಲು ಆರಂಭಿಸಿದ ವೇಳೆ ಆಕ್ರೋಶಿತಗೊಂಡ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದರು. ಅಲ್ಲದೇ ಬಲವಂತವಾಗಿ ಇಬ್ಬರು ಮಹಿಳಾ ಪತ್ರಕರ್ತರನ್ನು ವಾಪಸ್ ಕಳುಹಿಸಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ನಾನು ಶಬರಿಮಲೆ ದೇಗುಲ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಲು ಬಂದಿಲ್ಲ, ನನ್ನ ಕೆಲಸ ಮಾಡಲು ಬಂದಿದ್ದೇನೆ ಎಂದು ಸುಹಾಸಿನಿ ರಾಜ್ ವಿನಂತಿಸಿಕೊಂಡಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರು ಭಾರೀ ಪ್ರತಿಭಟನೆ ನಡೆಸಿ ದಾರಿ ಮಧ್ಯೆ ಕುಳಿತು ಪತ್ರಕರ್ತೆಯರ ವಿರುದ್ಧ ಘೋಷಣೆ ಕೂಗಿದ್ದರು. ಬೇರೆ ದಾರಿ ಕಾಣದೇ ಇಬ್ಬರು ವಾಪಸ್ ಹೋಗಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next