Advertisement

ಕೂತಲ್ಲಿ, ನಿಂತಲ್ಲಿ ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ; BSY

01:54 PM Nov 21, 2018 | Team Udayavani |

ಬೆಂಗಳೂರು:ರಾಜ್ಯದಲ್ಲಿ ಸಂಪನ್ಮೂಲ ಕ್ರೋಢಿಕರಣ ಆಗುತ್ತಿಲ್ಲ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ನಿಮಗೆ ವಿಧಾನಸೌಧದಲ್ಲಿ ಅಧಿಕಾರ ನಡೆಸುವ ನೈತಿಕ ಹಕ್ಕಿಲ್ಲ. ನೀವು(ಸಿಎಂ ಕುಮಾರಸ್ವಾಮಿ) ರಾಜೀನಾಮೆ ಕೊಡುವವರೆಗೂ ಕೂತಲ್ಲಿ, ನಿಂತಲ್ಲಿ ರಾಜೀನಾಮೆಗೆ ಒತ್ತಾಯಿಸಿ ಎಂದು ಮಹಿಳೆಯರಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

Advertisement

ರಾಜ್ಯದ ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೆ ಕಡೆಗಣಿಸಿರುವುದು ಮತ್ತು ಹೋರಾಟ ನಿರತ ಮಹಿಳೆಗೆ ಮುಖ್ಯಮಂತ್ರಿಗಳು ಅಪಮಾನ ಮಾಡಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆಡಳಿತಾರೂಢ ಕಾಂಗ್ರೆಸ್, ಜೆಡಿಎಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿಎಂಗೆ ಸಮಯ ಕೊಡೋಣ ಅಂತ ಆರು ತಿಂಗಳು ಸುಮ್ಮನಿದ್ದೇವು. ಆದರೆ ಇನ್ಮುಂದೆ ನಿಮಗೆ ಸಮಯಾವಕಾಶ ಇಲ್ಲ. ರಾಜೀನಾಮೆ ಕೊಡುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ರಾಜ್ಯದ ರೈತರನ್ನು ಕಡೆಗಣಿಸಿದ್ದಲ್ಲದೆ, ರೈತ ಮಹಿಳೆ ಬಳಿ ಕ್ಷಮಾಪಣೆ ಕೇಳಿ ಎಂದರೂ ಕೇಳಿಲ್ಲ. ಇಂತಹ ಸಿಡುಕು, ಅಹಂಭಾವದ ಮುಖ್ಯಮಂತ್ರಿ ಗದ್ದುಗೆಯಿಂದ ಇಳಿಯಬೇಕು. ಕಬ್ಬಿಗೆ ಬೆಂಬಲ ಬೆಲೆ ನೀಡದೇ ರೈತರನ್ನು ಟೀಕಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next