Advertisement

ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ

02:53 PM Mar 12, 2022 | Kavyashree |

ಶಿವಮೊಗ್ಗ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಪಾಲಿಕೆ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ಪಾಲಿಕೆ ವಿರೋಧ ಪಕ್ಷದ ಸದಸ್ಯರು ಪಾಲಿಕೆ ಎದುರು ಕೊಡಪಾನಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

Advertisement

ನಗರದಲ್ಲಿ ಕುಡಿಯುವ ನೀರಿನ ಸರಬರಾಜು ಹಾಗೂ ನಿರ್ವಹಣೆಗಾಗಿ ಮತ್ತು ಪ್ರತ್ಯೇಕ ಕಾಮಗಾರಿಗಾಗಿ ಉಪವಿಭಾಗಗಳನ್ನು ಪ್ರಾರಂಭಿಸಲು ಪಾಲಿಕೆ ನಿರ್ಣಯ ಕೈಗೊಂಡು ಅನೇಕ ತಿಂಗಳು ಕಳೆದರೂ ಸಹ ಈವರೆಗೂ ಪ್ರತ್ಯೇಕ ಉಪವಿಭಾಗ ಪ್ರಾರಂಭಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಇದರಿಂದ ನೀರಿನ ಸಮಸ್ಯೆ ನಗರದಲ್ಲಿ ತೀವ್ರಗೊಂಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ಪರಿಹರಿಸುವ ಸಲುವಾಗಿ ಮಂಡ್ಲಿ ಹಳೆ ಪಂಪ್‌ ಹೌಸ್‌ ಬಳಿ ತುಂಗಾ ನದಿಗೆ ಅಡ್ಡಲಾಗಿ ತಡೆಗೋಡೆ ನಿರ್ಮಿಸಿ 50 ಎಚ್‌.ಪಿ. ಸಾಮರ್ಥ್ಯದ ಎರಡು ವಿದ್ಯುತ್‌ ಪಂಪ್‌ ಗಳನ್ನು ಅಳವಡಿಸಿ ತುಂಗಾ ನದಿ ಮಧ್ಯ ಭಾಗದಿಂದ ನೀರು ಶೇಖರಣಾ ವ್ಯವಸ್ಥೆ ಕೈಗೊಳ್ಳುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ತೋರಲಾಗಿದೆ. ಪಾಲಿಕೆ ವ್ಯಾಪ್ತಿಯ ನಿತ್ಯ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಸಿಬ್ಬಂದಿ ನೇಮಕ ಮಾಡಿಕೊಳ್ಳದೆ ನಿರ್ಲಕ್ಷ್ಯ ತೋರಲಾಗಿದೆ ಎಂದು ದೂರಿದರು.

ಅವೈಜ್ಞಾನಿಕವಾಗಿ ನಿರಂತರ ಕುಡಿಯುವ ನೀರಿನ ಸರಬರಾಜು ಯೋಜನೆಗೆ ತೆರಿಗೆ ವಿಧಿಸಿರುವುದನ್ನು ಪುನರ್‌ ಪರಿಶೀಲಿಸಲು ಹಾಗೂ ಈ ಬಗ್ಗೆ ಬಳಕೆದಾರರ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಹಾಗೂ ನಾಗರಿಕ ಸಂಘಟನೆಗಳ ವಿಶೇಷ ಸಭೆ ಕರೆಯುವಂತೆ ಮಹಾಪೌರರಿಗೆ ಮನವಿ ಮಾಡಿಕೊಂಡರೂ ಸಭೆ ಕರೆಯದೆ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.

ಮೆಸ್ಕಾಂ, ನಗರ ನೀರು ಸರಬರಾಜು ಮಂಡಳಿ, ಮಹಾನಗರ ಪಾಲಿಕೆ ಅಧಿಕಾರಿಗಳ ನಡುವೆ ಸಮನ್ವಯತೆ ಕೊರತೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಈ ಕೂಡಲೇ ಗಮನಹರಿಸಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಈ ಬಗ್ಗೆ ವಿಶೇಷ ಸಭೆ ಆಯೋಜಿಸಬೇಕು ಎಂದು ಒತ್ತಾಯಿಸಿದರು.

Advertisement

ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಯೋಗೀಶ್‌, ರಮೇಶ್‌ ಹೆಗಡೆ, ರೇಖಾ ರಂಗನಾಥ್‌, ಪ್ರಮುಖರಾದ ರಂಗೇಗೌಡ, ರಂಗನಾಥ್‌, ಚೇತನ್‌, ಮಧುಸೂದನ್‌ ಮೊದಲಾದವರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next