Advertisement
ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಅಧ್ಯಕ್ಷ ನಾಗೇಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿ ಸದಸ್ಯ ಪುಟ್ಟಸ್ವಾಮಿ, ತಾಲೂಕಿನ ರೈತರು ಭತ್ತ ಒಕ್ಕಣೆ ಮಾಡಿ ಎರಡು ತಿಂಗಳು ಕಳೆದರೂ ತಾಲೂಕು ಆಡಳಿತ ಭತ್ತ ಖರೀದಿ ಕೇಂದ್ರ ತೆರೆದಿಲ್ಲ. ಜಿಲ್ಲಾಡಳಿತಕ್ಕೆ ಸಮರ್ಪಕ ಮಾಹಿತಿ ನೀಡಿ ಖರೀದಿ ಕೇಂದ್ರ ತೆರೆಯಲು ಮುಂದಾಗದ ಅಧಿಕಾರಿಗಳಿಗೆ ರೈತರ ಮೇಲೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
3 ಕೋಟಿ. ರೂ.ಅನುದಾನ: ತೋಟಗಾರಿಕೆ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ತಾಲೂಕಿಗೆ ಸರ್ಕಾರದಿಂದ 3 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ 1.8 ಕೋಟಿ ರೂ. ವಿನಿಯೋಗ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಫಲಾನುಭವಿಗಳಿಗೆ ಅನುದಾನ ಬಳಕೆ ಮಾಡಲು ಕ್ರಮ ವಹಿಸಲಾಗುವುದು.
ವಿವಿಧ ತೋಟಗಾರಿಕೆ ಬೆಳೆಗಳಿಗೆ ಶೇ.90 ಸಹಾಯಧನ ನೀಡಲಾಗುತ್ತಿದೆ. ತರಕಾರಿ ಬೆಳೆಗೆ ಶೇ.40, ಬಾಳೆ ಮತ್ತು ಕಲ್ಲಂಗಡಿ ಬೆಳೆಗೆ ಶೇ.33 ಹಾಗೂ ತೆಂಗು, ಮಾವು ಬೆಳೆಯಲು ಎಕರೆಗೆ 8500 ರೂ., ಹಳೆಯ ತೆಂಗಿನ ಮರಗಳನ್ನು ಕಿತ್ತು ಹೊಸದಾಗಿ ತೆಂಗಿನ ಸಸಿಗಳನ್ನು ಹಾಕಲು ಹೆಕ್ಟೇರ್ಗೆ 35 ಸಾವಿರ ರೂ. ಸಹಾಯಧನ ಸಿಗಲಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿ ರಾಕೇಶ್ ಮಾಹಿತಿ ನೀಡಿದರು.
ಖಾಸಗಿಯವರಿಂದ ಒತ್ತುವರಿ: ಸದಸ್ಯ ಪುಟ್ಟಸ್ವಾಮಿ ಹಿಟ್ಟನಹಳ್ಳಿ ಕೊಪ್ಪಲು ಬಳಿ ಇರುವ ತೋಟಗಾರಿಕೆ ಇಲಾಖೆಗೆ ಸೇರಿದ ಜಮೀನನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು, ಇದರ ಬಗ್ಗೆ ಕಳೆದ ಹಲವು ಸಭೆಗಳಲ್ಲಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕೂಡಲೇ ಇಲಾಖೆಗೆ ಸಂಬಂಧಿಸಿ ಭೂಮಿಯನ್ನು ತೆರವುಗೊಳಿಸಿ ವಶಕ್ಕೆ ಪಡೆದು ರೈತರಿಗೆ ಅನುಕೂಲವಾಗುವಂತೆ ತೋಟಗಾರಿಕೆ ಬೆಳೆಗಳ ತರಬೇತಿ ನೀಡುವ ನಿಟ್ಟಿನಲ್ಲಿ ಅಭಿವೃದ್ಧಿಗೊಳಿಸಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಗೆ ಸರ್ಕಾರದಿಂದ ಬಿಡುಗಡೆಯಾರುವ ಅನುದಾನ ಬಳಕೆಯಾಗಿರುವ ಬಗ್ಗೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಸಭೆ ಆರಂಭಕ್ಕೂ ಮುನ್ನಾ ಸಿದ್ಧಗಂಗಾ ಮಠ ಶಿವೈಕ್ಯ ಡಾ.ಶಿವಕುಮಾರ ಸ್ವಾಮೀಜಿಗೆ ಕೆಲಕಾಲ ಸಂತಾಪ ಸೂಚಿಸಲಾಯಿತು.
ಸಭೆಯಲ್ಲಿ ಉಪಾಧ್ಯಕ್ಷ ಸಿ.ಮಾಧು, ಸ್ಥಾಯಿ ಸಮಿತಿ ಅಧ್ಯಕ್ಷ ದೊಡ್ಡಯ್ಯ, ಇಒ ಸತೀಶ್, ಯೋಜನಾಧಿಕಾರಿ ಬಾಬು ಇದ್ದರು.