Advertisement

ಭೂ ಸುಧಾರಣೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ

12:54 PM Jun 14, 2020 | Suhan S |

ಹುಬ್ಬಳ್ಳಿ: ರಾಜ್ಯ ಸರಕಾರ ರಾಜ್ಯದ ಕೃಷಿ ಜಮೀನುಗಳನ್ನು ಯಾರು ಬೇಕಾದರೂ ಹೊಂದಲು ಅವಕಾಶ ನೀಡುವ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ಜೂ.16ರಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್ ವಾದಿ) ಸಿಪಿಐಎಂ ಧಾರವಾಡ ಜಿಲ್ಲಾ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿದೆ.

Advertisement

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದು ರಾಜ್ಯವನ್ನು ಅಧೋಗತಿ ತಳ್ಳುವ ಮತ್ತು ಕಾರ್ಪೊರೇಟ್‌ ಕಂಪನಿಗಳ ವಶ ಮಾಡುವ ಗುಲಾಮಿತನದ ಹಾಗೂ ಶತಮೂರ್ಖತನದ ಪ್ರತೀಕವಾಗಿದೆ. ಇದು ವ್ಯವಸಾಯದಲ್ಲಿ ತೊಡಗಿರುವ ಎಲ್ಲ ರೈತರು ಹಾಗೂ ಗೇಣಿದಾರರು, ಕೃಷಿ ಕೂಲಿಕಾರರು, ಕಾರ್ಮಿಕರು, ಕಸುಬುದಾರರು, ಅವರನ್ನು ಆಧರಿಸಿದ ಸಣ್ಣ ವ್ಯಾಪಾರಿಗಳು, ಕೃಷಿ ವ್ಯಾಪಾರಿಗಳು, ಒಟ್ಟಾರೇ ಗ್ರಾಮೀಣ ಪ್ರದೇಶವನ್ನೇ ಮಸಣ ಮಾಡುವ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ನಾಶ ಮಾಡುವ, ಕಾರ್ಪೊರೇಟ್‌ ಕಂಪನಿಗಳಿಗೆ ಜಮೀನುಗಳನ್ನು ನೇರವಾಗಿ ಒದಗಿಸುವ ಹಾಗೂ ಆ ಮೂಲಕ ರಾಜ್ಯವನ್ನು ತೀವ್ರ ಸಂಕಟಕ್ಕೀಡು ಮಾಡುವ ದುಷ್ಕೃತ್ಯವಾಗಿದೆ. ಇದು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಪೊàರೇಟ್‌ ಕಂಪನಿಗಳ ಸೇವೆಯನ್ನು ಪೈಪೋಟಿಯಲ್ಲಿ ಕೈಗೊಳ್ಳುತ್ತಿರುವುದನ್ನು ಬಹಿರಂಗ ಪಡಿಸುತ್ತಿದೆ. ಇದನ್ನು ಖಂಡಿಸಿ ಸಿಪಿಐಎಂ ಪ್ರತಿಭಟನೆ ನಡೆಸಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next