Advertisement

ಕೃಷಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

07:49 AM Jun 16, 2020 | Suhan S |

ಬೀದರ: ಜಿಲ್ಲೆಯಲ್ಲಿ ಕಳಪೆ ಬೀಜ ಸರಬರಾಜು ಮಾಡಿದವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ರೈತರ ಸಂಘದ ಸದಸ್ಯರು ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸೋಮವಾರ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

Advertisement

ಸಂಘದ ಸಿದ್ರಾಮಪ್ಪ ಆಣದೂರೆ, ಶ್ರೀಮಂತ ಬಿರಾದಾರ ಮತ್ತು ದಯಾನಂದ ಸ್ವಾಮಿ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿ ಕಾರಿಗೆ ಬರೆದ ಮನವಿಯನ್ನು ಕೃಷಿ ಅಧಿಕಾರಿಗೆ ಸಲ್ಲಿಸಿದರು. ಜಿಲ್ಲೆಯಲ್ಲಿ ಕೆಲವು ರೈತ ಸಂರ್ಪಕ ಕೇಂದ್ರಗಳಿಂದ ರೈತರು ಸೋಯಾಬಿನ್‌ ಬೀಜ ಪಡೆದು ಬಿತ್ತನೆ ಮಾಡಿದ್ದಾರೆ. ಆದರೆ, ಮೊಳಕೆಯೇ ಬಂದಿಲ್ಲ. ಇವು ಕಳಪೆ ಬೀಜ ಎಂಬ ಗೊಂದಲಕ್ಕೆ ಸಿಲುಕಿದ್ದಾರೆ. ಕಳಪೆ ಬೀಜ ಸರಬರಾಜು ಮಾಡಿದವರ ವಿರುದ್ದ ಕ್ರಿಮಿನಲ್‌ ದಾವೆ ದಾಖಲಿಸಬೇಕು. ರೈತರಿಂದ ಬೀಜ ಮರಳಿ ಪಡೆದು ಉತ್ತಮ ಬೀಜ ಪೂರೈಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ರೈತರಿಗೆ ಆರು ತಿಂಗಳಿಂದ ಹಣ ಪಾವತಿಸಿಲ್ಲ. ತಮಗೆ ಬೇಕಾದವರಿಗೆ ಮುಂಗಡ ಹಣ ಪಾವತಿಸಿ ಅನ್ಯಾಯ ಮಾಡಲಾಗುತ್ತಿದೆ. ನಿಯಮದಂತೆ ಬಡ್ಡಿ ಸಮೇತ ಹಣ ಪಾವತಿಸುವ ವವ್ಯಸ್ಥೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next