Advertisement

ಕಾವೇರಿ: ಯುವಕನ ಆತ್ಮಹತ್ಯೆ ಯತ್ನ

07:00 AM Apr 13, 2018 | Team Udayavani |

ಚೆನ್ನೈ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ಮುಂದುವರಿದಿರುವಂತೆಯೇ 25 ವರ್ಷದ ಯುವಕನೊಬ್ಬ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದಾನೆ. “ಕಾವೇರಿ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ನಿರ್ಲಕ್ಷ್ಯ ವಹಿಸು ತ್ತಿದ್ದು, ಪ್ರಧಾನಿ ಮೋದಿ ಅವರ ತಮಿಳುನಾಡು ಭೇಟಿ ಯನ್ನು ನಾನು ಖಂಡಿಸುತ್ತೇನೆ’ ಎಂದು ಮನೆಯ ಗೋಡೆಯಲ್ಲಿ ಬರೆದಿಟ್ಟು, ಸೀಮೆಎಣ್ಣೆ ಸುರಿದು ಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಪರಿಣಾಮ ಶೇ.90 ರಷ್ಟು ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ಪರಿಸ್ಥಿತಿ ಗಂಭೀರವಾಗಿ ಎಂದು ವೈದ್ಯರು ತಿಳಿಸಿದ್ದಾರೆ.

Advertisement

ಮತ್ತೂಂದೆಡೆ, ಪ್ರಧಾನಿ ಮೋದಿ ತಮಿಳುನಾಡು ಭೇಟಿ ಖಂಡಿಸಿ ವಿವಿಧ ತಮಿಳು ಸಂಘಟನೆಗಳು ಚೆನ್ನೈ ಏರ್‌ಪೋರ್ಟ್‌ನಲ್ಲೇ ಕಪ್ಪುಬಾವುಟ ಪ್ರದರ್ಶಿಸಿ, ಪ್ರತಿಭಟನೆ ನಡೆಸಿವೆ. ಜತೆಗೆ, “ಗೋ ಬ್ಯಾಕ್‌ ಮೋದಿ’ ಎಂದು ಘೋಷಣೆಗಳನ್ನೂ ಕೂಗಿವೆ. ಡಿಎಂಕೆ ನೇತೃತ್ವದಲ್ಲಿ ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು ಕಪ್ಪು ಬಟ್ಟೆಗಳನ್ನು ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡವು. ಡಿಎಂಕೆ ನಾಯಕ ಮನೆಗಳ ಮೇಲೆಯೂ ಕಪ್ಪು ಬಾವುಟಗಳನ್ನು ಹಾರಿಸಲಾಗಿತ್ತು. ಗಾಲಿ ಕುರ್ಚಿಯಲ್ಲಿರುವ ಡಿಎಂಕೆ ವರಿಷ್ಠ ಕರುಣಾನಿಧಿ ಅವರೂ ಪ್ರತಿಭಟನಾ ಸೂಚಕವಾಗಿ ಕಪ್ಪು ಶರ್ಟ್‌ ಧರಿಸಿದ್ದರು. ಇದೇ ವೇಳೆ, ಮಂಡಳಿ ರಚಿಸುವಂತೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಸಿಎಂ ಪಳನಿಸ್ವಾಮಿ ಅವರು ಮನವಿ ಪತ್ರ ನೀಡಿದ್ದಾರೆ. ಜತೆಗೆ, ಕಾವೇರಿ ನದಿ ಮುಖಜ ಭೂಮಿಯ ರೈತರು ನೀರಾವರಿಗೆ ಕಾವೇರಿ ನದಿಯನ್ನೇ ಅವಲಂಬಿಸಿದ್ದಾರೆ ಎಂದ ಇದೇ ವೇಳೆ ತಿಳಿಸಿದ್ದಾರೆ.

ಕೂಡಲೇ ಪ್ರಧಾನಿ ಮೋದಿ ಅವರು ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು. ಆ ಮೂಲಕ ಕರ್ನಾಟಕ ಚುನಾವಣೆಗಾಗಿಯೇ ಸರಕಾರ ಮಂಡಳಿ ರಚನೆಗೆ ವಿಳಂಬ ಮಾಡುತ್ತಿದೆ ಎಂಬ ಆರೋಪವನ್ನು ಸುಳ್ಳಾಗಿಸಬೇಕು.
ಕಮಲ್‌ ಹಾಸನ್‌, ಮಕ್ಕಳ್‌ ನೀಧಿ ಮಯ್ಯಂ ಸ್ಥಾಪಕ

Advertisement

Udayavani is now on Telegram. Click here to join our channel and stay updated with the latest news.

Next