Advertisement

ಸಮರ್ಪಕ ಕುಡಿಯುವ ನೀರು ಪೂರೈಸಿ: ಜಿಲ್ಲಾಧಿಕಾರಿ ರವಿ

03:44 PM Mar 02, 2021 | Team Udayavani |

ಚಾಮರಾಜನಗರ: ಬೇಸಿಗೆ ಕಾಲ ಆರಂಭ ಹಿನ್ನೆಲೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮಾಂತರಪ್ರದೇಶದ ಯಾವುದೇ ಭಾಗದಲ್ಲಿ ಕುಡಿವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ತಾಕೀತು ಮಾಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೇಸಿಗೆ ವೇಳೆ ಉಂಟಾಗಬಹುದಾದ ಅಭಾವಪರಿಸ್ಥಿತಿ ಮತ್ತು ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿವ ನೀರಿನ ಸರಬರಾಜು ಕುರಿತು ಸೋಮವಾರ ನಡೆದಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂದಿನ 3-4 ತಿಂಗಳ ಕಾಲ ನಗರ, ಪಟ್ಟಣ ಪ್ರದೇಶಗಳೇ ಇರಲಿ ಅಥವಾ ಗ್ರಾಮೀಣ ಭಾಗಗಳೇಇರಲಿ ಎಲ್ಲಿಯೂ ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಎಂದು ನಿರ್ದೇಶನ ನೀಡಿದರು.

ಆದ್ಯತೆ ಇರಲಿ: ಸಾರ್ವಜನಿಕ ನೀರಿನ ಲಭ್ಯತೆ ಇಲ್ಲದ ಕಡೆ ಖಾಸಗಿ ಬೋರ್‌ವೆಲ್‌ ಗುರುತಿಸಿನೀರು ಸರಬರಾಜು ಮಾಡಬೇಕಿದೆ,ತಹಶೀಲ್ದಾರರು, ತಾಪಂ ಇಒಗಳು, ಗ್ರಾಪಂಅಧಿಕಾರಿಗಳು ಜತೆಗೂಡಿ ಕುಡಿಯುವ ನೀರಿಬವಣೆ ನೀಗಿಸಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ಆದ್ಯತೆ ಮೇರೆಗೆ ನೀರು ಒದಗಿಸುವ ಕಾರ್ಯ ಮಾಡಬೇಕೆಂದರು.

ಕಾಮಗಾರಿ ಪೂರ್ಣಗೊಳಿಸಿ: ಹಾಗೆಯೇ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಏನಾದರೂ ಸಮಸ್ಯಗಳಿವೆ ಎಂಬ ಬಗ್ಗೆ ಕೂಡಲೇ ಪರಿಶೀಲಿಸಿಕೊಳ್ಳಬೇಕು, ತಾಂತ್ರಿಕ ತೊಂದರೆಅಥವಾ ನಿರ್ವಹಣೆ ಕಾರ್ಯದಲ್ಲಿ ಬದಲಾವಣೆ ಅಗತ್ಯವಿದ್ದರೆ ಕೂಡಲೇ ಸರಿಪಡಿಸಬೇಕು. ಬಾಕಿಇರುವ ಶುದ್ಧ ಕುಡಿವ ನೀರಿನ ಘಟಕಗಳ ಅಳವಡಿಕೆಕಾಮಗಾರಿಯನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದರು.ಬೇಸಿಗೆ ವೇಳೆ ಜಾನುವಾರುಗಳಿಗೂ ನೀರಿನ ಕೊರತೆ ಕಾಡಬಾರದು. ಮೇವು ಪೂರೈಕೆಯಲ್ಲಿಯೂ ಯಾವುದೇ ವ್ಯತ್ಯಯವಾಗಬಾರದು ಎಂದರು.

ಅರಿವು ಮೂಡಿಸಿ: ಬೇಸಿಗೆ ವೇಳೆ ಸಾಮಾನ್ಯವಾಗಿಎದುರಾಗಬಹುದಾದ ನಿರ್ಜಲೀಕರಣ, ಮಕ್ಕಳಿಗೆ ಕಾಣಿಸಿಕೊಳ್ಳಬಹುದಾದ ಅನಾರೋಗ್ಯದಂತಹಸಮಸ್ಯೆಗಳನ್ನು ಹೇಗೆ ನಿವಾರಿಸಿಕೊಳ್ಳಬೇಕು ಎಂಬಬಗ್ಗೆಯೂ ಸೇರಿ ಆರೋಗ್ಯ ಸಂಬಂಧಿ ಸಲಹೆಗಳನ್ನು ತಾಲೂಕು ಆರೋಗ್ಯಾಧಿಕಾರಿಗಳಿಂದ ನೀಡುವ ವ್ಯವಸ್ಥೆಯಾಗಬೇಕು ಎಂದರು.

Advertisement

ಸಮರ್ಪಕ ತ್ಯಾಜ್ಯ ವಿಲೇವಾರಿ ಮಾಡಿ: ಗ್ರಾಪಂ, ನಗರಸಭೆ, ಪುರಸಭೆ, ಪಪಂ ವ್ಯಾಪ್ತಿಯಲ್ಲಿ ಸ್ವತ್ಛತೆಗೆವಿಶೇಷ ಗಮನ ಹರಿಸಬೇಕು. ಕಸ ಇತರ ತ್ಯಾಜ್ಯ ವಿಲೇವಾರಿ ನಿಗದಿತ ಸಮಯದೊಳಗೆ ಮುಗಿಯಬೇಕು. ಚರಂಡಿ ಶುಚಿಗೊಳಿಸಿಶುದ್ಧವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿ ದೇವಿ, ಉಪವಿಭಾಗಾಧಿಕಾರಿ ಡಾ.ಗಿರೀಶ್‌ ದಿಲೀಪ್‌ ಬಡೋಲೆ, ತಹಶೀಲ್ದಾರ್‌ರಾದ ಕೆ.ಕುನಾಲ್‌,ಚಿದಾನಂದ ಗುರುಸ್ವಾಮಿ, ನಾಗರಾಜು, ತಾಪಂ ಇಒ ಪ್ರೇಮ್‌ಕುಮಾರ್‌, ಶ್ರೀಕಂಠರಾಜೇಅರಸ್‌, ಜಿಪಂ ಸಹಾಯಕ ಯೋಜನಾಧಿಕಾರಿ ಕುಲದೀಪ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾನಿರ್ದೇಶಕ ಕೆ.ಸುರೇಶ್‌, ಜಂಟಿ ಕೃಷಿ ನಿರ್ದೇಶಕಿ ಚಂದ್ರಕಲಾ, ಪಶುಪಾಲನಾ ಇಲಾಖೆಉಪನಿರ್ದೇಶಕ ವೀರಭದ್ರಯ್ಯ, ಇತರೆ ಇಲಾಖೆಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next