Advertisement

ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸಿ: ಆರಗ ಜ್ಞಾನೇಂದ್ರ

02:47 PM Nov 09, 2022 | Team Udayavani |

ತುಮಕೂರು: ಸರ್ಕಾರಿ ಆಸ್ಪತ್ರೆಗಳನ್ನು ಸಾರ್ವಜನಿಕ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದು, ಬಡರೋಗಿಗಳಿಗೆ  ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು  ನಮ್ಮ ಆದ್ಯ ಕರ್ತವ್ಯ ಎಂದು ತಿಳಿದು ಆಸ್ಪತ್ರೆಯಲ್ಲಿ  ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸುವಂತೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರಗ ಜ್ಞಾನೇಂದ್ರ ಹೇಳಿದರು.

Advertisement

ನಗರದಲ್ಲಿ ಇಂದು, ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಅಧಿಕಾರಿಗಳೂ ಹಾಗೂ ವೈದ್ಯಾಧಿಕಾರಿಗಳೊಂದಿಗೆ, ಪರಿಶೀಲನೆ ಸಭೆ ನಡೆಸಿ, ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಇರಬಹುದಾದ ಕುಂದು ಕೊರತೆಗಳ ಬಗ್ಗೆ ಹಾಗೂ ಪರಿಹಾರಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.

ಇದನ್ನೂ ಓದಿ: ಇಂಟರ್‌ನೆಟ್‌ನಲ್ಲಿ ನನ್ನ ಅಪಹಾಸ್ಯ ಹೃದಯವಿದ್ರಾವಕ: ಟ್ರೋಲ್‌ ಗಳಿಗೆ ರಶ್ಮಿಕಾ ಮಂದಣ್ಣ

ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ದೂರುಗಳು ಬಂದಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ಲೋಪಗಳು ಉಂಟಾದರೆ ನಿರ್ಧಾಕ್ಷಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಆಸ್ಪತ್ರೆಯಲ್ಲಿ ಸರಕಾರದಿಂದ ದೊರೆಯುವ ಉಚಿತ ಔಷಧಿ ಪೂರೈಕೆ, ಆಂಬ್ಯುಲೆನ್ಸ್, ಬೆಡ್ ಲಭ್ಯತೆ, ಆಕ್ಸಿಜನ್, ಮುಂತಾದವುಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಸಚಿವರು, ಆರೋಗ್ಯ ಸೇವೆ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕು, ಯಾವುದೇ ಕಾರಣಕ್ಕೂ ಬಡವರು ಔಷದಿಗಾಗಿ ಪರದಾಡುವ ಪರಿಸ್ಥಿತಿ ಬರಬಾರದು, ಸರ್ಕಾರಿ ಆಸ್ಪತ್ರೆಯಲ್ಲಿರುವ ಮಾತ್ರೆ, ಔಷಧಗಳನ್ನು ವೈದ್ಯರು, ರೋಗಿಗಳಿಗೆ ವಿತರಿಸಬೇಕು. ಮಾತ್ರೆ, ಔಷಧಗಳು ದಾಸ್ತಾನಿದ್ದರೂ ಹೊರಗಿನ ಮೆಡಿಕಲ್ ಸ್ಟೋರ್‌ಗಳಿಗೆ ಬರೆದುಕೊಟ್ಟರೆ ಅಂತಹ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು, ಇತ್ತೀಚೆಗೆ ಹೆರಿಗೆ ಸಲುವಾಗಿ ಆಸ್ಪತ್ರೆಗೆ ಬಂದು, ಸೇವೆ ಸಿಗದೆ, ಮರಣ ಹೊಂದಿದ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸಚಿವರು, ಇನ್ನು ಮುಂದೆ, ಇಂಥಹ ಅಮಾನವೀಯ ಘಟನೆಗಳು ಮರುಕಳಿಸಬಾರದು, ಈ ರೀತಿಯ ಘಟನೆ ಎಂದೂ ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ ಎಂದರು, ವೈದ್ಯರು ಮತ್ತು ಸಿಬ್ಬಂದಿಗಳು ಸಾರ್ವಜನಿಕರ ಸೇವೆಗೆ ಸದಾ ಲಭ್ಯವೀದ್ದು,ಆಸ್ಪತ್ರೆಯ ಶುಚಿತ್ವ ಮತ್ತು ರೋಗಿಗಳ ಸಮಗ್ರ ಆರೈಕೆಗೆ ಗಮನ ನೀಡಿ, ಶಿಸ್ತು, ಸಂಯಮದಿಂದ ಕರ್ತವ್ಯ ನಿರ್ವಹಿಸಬೇಕು, ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.

ಹಲವು ವೈದ್ಯರೂ ಹಾಗೂ ಇತರ ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಹಗಲು ರಾತ್ರಿಯೆನ್ನದೆ ಸಮರ್ಪಣ ಮನೋಭಾವನೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ, ಅದರಿಂದಾಗಿಯೇ, ಸರ್ಕಾರಿ ಆಸ್ಪತ್ರೆ ಬಗ್ಗೆ ಜನರು ನಂಬಿಕೆ ಉಳಿಸಿಕೊಂಡು ಬರುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಯಲ್ಲಿ ಒಳ್ಳೆಯ ಸೌಕರ್ಯಗಳು ಹಾಗೂ ತಜ್ಞ ವ್ಯೆಧ್ಯರಿದ್ದಾರೆ ಅವುಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು, ಒಳ್ಳೆಯ ಸೇವೆ ನೀಡುವುದು ವೈದ್ಯರ ಕರ್ತವ್ಯ. ನಮಗೆ ವೇತನವು ಸೀಗುವುದು ಜನರ ತೆರಿಗೆಯ ಹಣ ಎಂಬುದು ನೆನಪಿಟ್ಟುಕೊಳ್ಳಬೇಕು ಎಂದರು,

Advertisement

ಆಸ್ಪತ್ರೆ ಅಭಿವೃದ್ಧಿ ಕುರಿತು ಚರ್ಚಿಸಿ, ನಿಮ್ಮ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಿ ಯಾವುದೇ ಸಮಸ್ಯೆ ಇದ್ದರೂ ಸರಕಾರ ಪರಿಹಾರ ಒದಗಿಸಲಿದೆ, ಈಗ ಪರಿಶೀಲನೆ ನಡೆಸಿದ ಬಳಿಕವೂ ಮತ್ತೊಮ್ಮೆ ಬಂದು ಪರಿಶೀಲನೆ ನಡೆಸಿ ಗುರಿ ತಲುಪಲಾಗಿದೆಯೇ ಎಂದು ಗಮನಿಸಲಾಗುವುದು ರಾಜ್ಯಮಟ್ಟದ ಉನ್ನತ ಸಭೆಯಲ್ಲಿ ಸರ್ಕಾರಿ ಆಸ್ಪತ್ರೆ ಸುಧಾರಣೆ ಬಗ್ಗೆ ಚರ್ಚಿಸಲಾಗುದು ಎಂದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ವೀಣಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹರಾಜು, ಸೇರಿದಂತೆ ಹಿರಿಯ ಅಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next