Advertisement

ಸರ್ಕಾರಿ ಶಾಲಾ ಕಾಲೇಜಿಗೆ ಮೂಲ ಸೌಲಭ್ಯ ಒದಗಿಸಿ

12:36 PM Jan 28, 2021 | Team Udayavani |

ಹೊಳೆನರಸೀಪುರ: ದೇಶ ಗಣರಾಜ್ಯವಾಗಿ 72 ವರ್ಷ ಕಳೆದಿದೆ. ಆದರೂ, ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಇಲ್ಲದೆ, ವಿದ್ಯಾರ್ಥಿ ಗಳು ಶಿಕ್ಷಣದಿಂದ ವಂಚಿತ ರಾಗುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಎಚ್‌.ಡಿ.ರೇವಣ್ಣ ವಿಷಾದ ವ್ಯಕ್ತಪಡಿಸಿದರು.

Advertisement

ಪಟ್ಟಣದ ಬಯಲಯ ರಂಗ ಮಂದಿರದ ಆವರಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ 72ನೇ ಗಣರಾಜ್ಯೊತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಲೇಜುಗಳಲ್ಲಿ ಬೆಂಚು, ಕುರ್ಚಿಗಳು ಇಲ್ಲದೆ, ಮಕ್ಕಳಿಗೆ ಓದಲು ತೊಂದರೆ ಆಗಿದೆ. ಖಾಸಗಿಯಂತೆ ಸರ್ಕಾರಿ ಶಾಲೆಗಳಿಗೂ ಪೂರ್ಣಪ್ರಮಾಣದ ಮೂಲ ಸೌಕರ್ಯ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ವಿವರಿಸಿದರು.

ಇದನ್ನೂ ಓದಿ:ಮಹಾರಾಷ್ಟ್ರ ಸಿಎಂ ‘ಬೆಳಗಾವಿ’ ಹೇಳಿಕೆ: ರಾಜ್ಯದ ನಾಯಕರ ಖಂಡನೆ, ಸಚಿವೆ ಜೊಲ್ಲೆ ಎಚ್ಚರಿಕೆ

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವನ್ನು ತಾಲೂಕು ಆಡಳಿತ ಸನ್ಮಾನಿಸಿ ಗೌರವಿಸಿತು. ಪುರಸಭಾಧ್ಯಕ್ಷೆ ವೀಣಾ ರಾಜೇಶ್‌, ಉಪಾಧ್ಯಕ್ಷರಾದ ತ್ರಿಲೋಚನಾ, ತಾಪಂ ಉಪಾಧ್ಯಕ್ಷ ಜವರೇಗೌಡ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next