Advertisement

ಶುದ್ಧ ಕುಡಿಯುವ ನೀರು ಕೊಡಿ

12:10 PM Oct 16, 2019 | Team Udayavani |

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿಯಲ್ಲಿರುವ ಅತ್ತಿವಾಡ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ದೊರೆಯದೇ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ದೂರಿ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಹಾಗೂ ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಅವರಿಗೆ ಮನವಿ ಸಲ್ಲಿಸಿದರು. ಅತ್ತಿವಾಡ ಗ್ರಾಮದಲ್ಲಿ 3 ಸಾವಿರಕ್ಕಿಂತಲೂ ಹೆಚ್ಚು ಜನರು ವಾಸವಾಗಿದ್ದು, ಆದರೆ ಶುದ್ಧ ಕುಡಿಯುವ ನೀರು ಇಲ್ಲದೇ ಜನರು ಪರಿತಪಿಸುತ್ತಿದ್ದಾರೆ ಎಂದು ದೂರಿದರು.

ಅತ್ತಿವಾಡದಿಂದ ಬೆಳಗಾವಿಗೆ ಹೋಗಲು ಬಸ್‌ ಸೌಕರ್ಯವೂ ಇಲ್ಲದಂತಾಗಿದೆ. ರಸ್ತೆಗಳು ಸರಿಯಾಗಿ ಇಲ್ಲದೇ ವಾಹನಸಂಚಾರವೂ ನಿಂತು ಹೋಗಿದೆ. ಗ್ರಾಮದ ಪ್ರೌಢಶಾಲೆಯಲ್ಲಿ ಶಿಕ್ಷಕರು ನಿಗದಿತ ವೇಳೆಗೆ ಬಾರದ್ದಕ್ಕೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಶುದ್ಧ ಕುಡಿಯುವ ನೀರು, ಬಸ್‌ ಸೌಕರ್ಯ, ರಸ್ತೆ ದುರಸ್ತಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ವಕೀಲ ಎನ್‌.ಆರ್‌. ಲಾತೂರ, ಕಾರ್ಮಿಕ ಸಂಘದ ಅಧ್ಯಕ್ಷ ಜ್ಯೋತಿಬಾ ಪಾಟೀಲ, ಉಮೇಶ ಪಾಟೀಲ ಸೇರಿದಂತೆ ಗ್ರಾಮಸ್ಥರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next