Advertisement

ಕ್ವಾರಂಟೈನ್‌ ಕೇಂದ್ರಗಳಲ್ಲಿ ಸೌಲಭ್ಯ ಒದಗಿಸಿ

06:11 AM May 23, 2020 | Suhan S |

ಯಾದಗಿರಿ: ಜಿಲ್ಲೆಯಲ್ಲಿ ಈಗಾಗಲೇ ಹೊರ ರಾಜ್ಯಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ವಸತಿ ಶಾಲೆ ಮತ್ತು ಹಾಸ್ಟೆಲ್‌ ಗಳಲ್ಲಿ ಪ್ರತ್ಯೇಕವಾಗಿರಿಸಲಾಗಿದ್ದು, ಕ್ವಾರಂಟೈನ್‌ ಮಾಡುವ ಎಲ್ಲ ವಲಸೆಗಾರರಿಗೂ ಅಚ್ಚುಕಟ್ಟಾಗಿ ಮೂಲ ಸೌಲಭ್ಯಗಳ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಪಂ ಸಭಾಂಗಣದಲ್ಲಿ ನಡೆದ ಹೊರ ರಾಜ್ಯಗಳಿಂದ ಬಂದಿರುವ ವಲಸೆಗಾರರನ್ನು ಅವಲೋಕನೆಗಾಗಿ ಇರಿಸಲಾದ ಶಾಲಾ ಕ್ವಾರಂಟೈನ್‌ ಕೇಂದ್ರಗಳ ಸೌಲಭ್ಯ ಹಾಗೂ ಹೆಲ್ತ್‌ ವಾಚ್‌ ಆ್ಯಪ್‌ ಮೂಲಕ ಕುಟುಂಬಗಳ ಸಾರ್ವತ್ರಿಕ ಸಮೀಕ್ಷೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಹೆಚ್ಚಿನ ವಲಸೆಗಾರರು ಜಿಲ್ಲೆಗೆ ವಾಪಸ್ಸಾಗುತ್ತಿರುವುದರಿಂದ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಕ್ವಾರಂಟೈನ್‌ ಕೇಂದ್ರಗಳಾಗಿ ಬಳಸಿಕೊಳ್ಳಲಾಗುತ್ತಿದೆ. ಕ್ವಾರಂಟೈನ್‌ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ನಿಗದಿತ ಸಮಯಕ್ಕೆ ಸರಿಯಾಗಿ ಊಟ ಕೊಡಬೇಕು ಎಂದರು.

ಹಾಸ್ಟೆಲ್‌ಗ‌ಳಿಗೆ ವಾರ್ಡನ್‌, ಕಾಲೇಜುಗಳಿಗೆ ಪ್ರಾಂಶುಪಾಲರು ಹಾಗೂ ಶಾಲೆಗಳಿಗೆ ಸಂಬಂಧಪಟ್ಟ ಮುಖ್ಯಶಿಕ್ಷಕರು ಮತ್ತು ಪಿಡಿಒ ಅವರನ್ನು ನೋಡಲ್‌ ಅಧಿಕಾರಿಗಳೆಂದು ನೇಮಿಸಲಾಗಿದೆ. ಇವರು ವಲಸೆಗಾರರ ವಿವರಗಳನ್ನು ನಿಗದಿತ ನಮೂನೆಯಲ್ಲಿ ಮಾಹಿತಿ ಸಿದ್ಧಪಡಿಸಿ, ಪ್ರತಿದಿನ ಸಂಜೆ 5 ಗಂಟೆಯೊಳಗಾಗಿ ಜಿಲ್ಲಾಧಿ ಕಾರಿ ಕಾರ್ಯಾಲಯಕ್ಕೆ ಇ-ಮೇಲ್‌ ಮಾಡಬೇಕು. ಮಾಹಿತಿ ಬಗ್ಗೆ ಮತ್ತು ಕ್ವಾರಂಟೈನ್‌ ಕೇಂದ್ರಗಳ ಸೌಲಭ್ಯಗಳ ವ್ಯವಸ್ಥೆಯ ಮೇಲ್ವಿಚಾರಣೆಯನ್ನು ಆಯಾ ತಾಲೂಕಿನ ಬಿಇಒ, ಬಿಆರ್‌ಪಿ, ಸಿಆರ್‌ಪಿಗಳು ಮಾಡಬೇಕು ಎಂದು ಸೂಚಿಸಿದರು.

ಈ ವೇಳೆ ಜಿಪಂ ಸಿಇಒ ಶಿಲ್ಪಾ ಶರ್ಮಾ, ಎಸ್ಪಿ ಋಷಿಕೇಶ ಸೋನಾವಣೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next