Advertisement

ಕೂಲಿ ಕಾರ್ಮಿಕರಿಗೆ ಸೌಲಭ್ಯ ನೀಡಿ

12:37 PM Jan 02, 2020 | Team Udayavani |

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚಿಸಿದರು.

Advertisement

ತಾಲೂಕಿನ ಕಾಕತಿ ಹಾಗೂ ಕೇದನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ಮಾಡಿ ಮಾತನಾಡಿದ ಅವರು ವಯಸ್ಸಾದ ಕೂಲಿ ಕಾರ್ಮಿಕರಿಗೆ ಕೆಲಸದಲ್ಲಿ ಸಡಿಲಿಕೆ ನೀಡಬೇಕು ಮತ್ತು ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ ಸೇರಿದಂತೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಗಳನ್ನು ಕಾಮಗಾರಿ ನಡೆದ ಸ್ಥಳಗಳಲ್ಲಿ ಕಡ್ಡಾಯವಾಗಿ ಒದಗಿಸಬೇಕು ಎಂದು ಹೇಳಿದರು.

ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಕಲಾದಗಿ, ಸಹಾಯಕ ನಿರ್ದೇಶಕ ರಾಜೇಂದ್ರ ಮೊರಬದ, ಪಿಡಿಒ ಅಶ್ವಿ‌ನಿ ಕುಂದರ, ಕಾಕತಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ, ಎಂ.ಫ್‌. ದೇಸಾಯಿ, ಅರಣ್ಯ ರಕ್ಷಕರಾದ ವೈ ಬಿರಾದಾರ, ಅನ್ನೇಶ ಕಂಬಾರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next