Advertisement

ಶಾಲೆ ಮುಚ್ಚುವ ಬದಲು ಸೌಲಭ್ಯ ಕಲ್ಪಿಸಿ

11:35 AM Nov 29, 2017 | Team Udayavani |

ಮಹದೇವಪುರ: ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ ಅವುಗಳ ಉಳಿವಿಗೆ ಸರ್ಕಾರ ಮುಂದಾಗಬೇಕೆಂದು ಆವಲಹಳ್ಳಿ ಗ್ರಾ.ಪಂ ಅಧ್ಯಕ್ಷೆ ಜ್ಯೋತಿ ದೇವರಾಜ್‌ ಮನವಿ ಮಾಡಿದ್ದಾರೆ.

Advertisement

ಚೀಮಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ಸೇಂಟ್‌ ಗೋಬಿನ್‌ ಲಿಮಿಟೆಡ್‌ ಮತ್ತು ರೋಟರಿ ಸಂಸ್ಥೆಗಳ ಸಿಎಸ್‌ಆರ್‌ ಫ‌ಂಡ್‌ನ‌ಲ್ಲಿ ನಿರ್ಮಿಸಿರುವ ನೂತನ ಕೊಠಡಿಗಳು ಹಾಗೂ ಇ-ಶೌಚಾಲಯಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಯಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಸಮರ್ಪಕ ಕೊಠಡಿಗಳಿಲ್ಲ. ಗ್ರಾ.ಪಂ ವತಿಯಿಂದ ಒಬ್ಬ ಅಥಿತಿ ಶಿಕ್ಷಕರನ್ನು ನೇಮಿಸಿದ್ದು, ಮತ್ತೂಬ್ಬ ಶಿಕ್ಷಕರ ಅವಶ್ಯಕತೆಯಿದೆ. ಮಕ್ಕಳಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ಶಾಲೆ ಮುಚ್ಚುವ ಬದಲಿಗೆ ಶಾಲೆಗಳಿಗೆ ಅಗತ್ಯವಿರುವ ಕೊಠಡಿ, ಶೌಚಲಯ, ಶಿಕ್ಷಕರು ಹಾಗೂ ಸಮರ್ಪಕ ಮೂಲ ಸೌಲಭ್ಯ ಕಲ್ಪಿಸಬೇಕಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಲೀಂ ಪಾಷ, ಸೇಂಟ್‌ಗೊಬಿನ್‌ನ ಕಿರಣ್‌, ಜಿ.ಪಂ ಸದಸ್ಯ ಕೆ.ಕೆಂಪೆರಾಜ್‌, ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಗುರುಶಿವಮೂರ್ತಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next