Advertisement

ಮಕ್ಕಳಿಗೆ ಮಧ್ಯಾಹ್ನದ ಊಟ ವ್ಯವಸ್ಥೆ ಮಾಡಲು ರಾಜ್ಯ ಸರಕಾರಗಳಿಗೆ ಸೂಚನೆ

11:20 AM Mar 21, 2020 | Hari Prasad |

ಶಾಲೆಗಳು ಪುನಾರಂಭವಾಗುವವರೆಗೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ ಅಥವಾ ಆಹಾರ ಭದ್ರತೆ ಭತ್ಯೆ ನೀಡುವಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ರಾಜ್ಯಗಳಿಗೆ ನಿರ್ದೇಶಿಸಿದೆ.

Advertisement

ದೇಶ ಅತ್ಯಂತ ಸಂಕಷ್ಟದ ಸಮಯವನ್ನು ಎದುರಿಸುತ್ತಿದೆ. ಇಂಥ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರಕಾರಗಳು ಶಾಲೆಗಳು ಮತ್ತೆ ತೆರೆಯುವವರೆಗೂ ಮಕ್ಕಳಿಗೆ ಬಿಸಿ ಊಟ ನೀಡುವ ವ್ಯವಸ್ಥೆ ಮಾಡಬೇಕು ಅಥವಾ ಆಹಾರ ಭದ್ರತೆ ವ್ಯವಸ್ಥೆ ಮಾಡಬೇಕು ಎಂದು ಎಲ್ಲ ರಾಜ್ಯಸರಕಾರಗಳಿಗೂ ಪತ್ರ ರವಾನಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next