Advertisement

ದ್ರಾಕ್ಷಿ ಬೆಳೆಗಾರರಿಗೆ ಪರಿಹಾರ ಒದಗಿಸಿ

11:28 AM May 09, 2020 | mahesh |

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ಮಹಾಮಾರಿಯಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಕಷ್ಟಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರದ ಗಮನಕ್ಕೆ ತಂದು ದ್ರಾಕ್ಷಿ ಮತ್ತು ತರಕಾರಿ ಬೆಳೆಗಳಿಗೆ ಸೂಕ್ತ ರೀತಿಯಲ್ಲಿ ಪರಿಹಾರ ಒದಗಿಸಿ ಕೊಡಬೇಕೆಂದು ಕೆಪಿಸಿಸಿ ಸದಸ್ಯ ಎಸ್‌.ಪಿ.ಶ್ರೀನಿವಾಸ್‌, ಶುಕ್ರವಾರ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

Advertisement

ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಶ್ರೀನಿವಾಸ್‌, ಕೋವಿಡ್  ಪರಿಣಾಮ ದ್ರಾಕ್ಷಿ ಬೆಳೆಗಾರರಿಗೆ ಹಾಕಿದ ಬಂಡವಾಳ ಸಹ ಕೈ ಸೇರದೆ ನಷ್ಟಕ್ಕೆ ಗುರಿಯಾಗಿದ್ದು, ಸರ್ಕಾರದ ಮೇಲೆ ಒತ್ತಡ ತಂದು ಪರಿಹಾರ ಒದಗಿಸಿ ಕೊಡಬೇಕೆಂದರು. ರೈತರಿಗೆ ಕೆ.ಜಿ.ದ್ರಾಕ್ಷಿಗೆ 10, 15 ರೂ. ಸಿಗುತ್ತಿದೆ. ಇದ ರಿಂದ ತೀವ್ರ ಆರ್ಥಿಕ ನಷ್ಟಕ್ಕೆ ಗುರಿಯಾಗಬೇಕಿದೆ. ಜಿಲ್ಲೆ  ಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರೈತರು ದ್ರಾಕ್ಷಿ, ಹಣ್ಣು ತರಕಾರಿ ಬೆಳೆಯುತ್ತಿದ್ದು, ಸರ್ಕಾರ
ಕೇವಲ ಹೂವು ಬೆಳೆಗಾರರಿಗೆ ಮಾತ್ರ ಪರಿಹಾರ ಘೋಷಿಸಿ ದ್ರಾಕ್ಷಿ ಹಾಗೂ ಹಣ್ಣು ಮಾರಾಟಗಾರರನ್ನು ಕಡೆಗಣಿಸಿದೆ ಎಂದು ಶ್ರೀನಿವಾಸ್‌ ಸಿದ್ದರಾಮಯ್ಯರ ಗಮನಕ್ಕೆ ತಂದಿ ದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಸೇರಿದಂತೆ ಮತ್ತಿತರ ಕಾಂಗ್ರೆಸ್‌ ನಾಯಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next