Advertisement

ಮಂಗಳೂರು;ಶಾಲಾ ಬಸ್ ಮೇಲೆ ಉರುಳಿದ ಮರ – 17 ಮಕ್ಕಳು ಪ್ರಾಣಾಪಾಯದಿಂದ ಪಾರು

12:20 PM Aug 15, 2019 | Hari Prasad |

ಮಂಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನವೊಂದರ ಮೇಲೆ ಮರ ಉರುಳಿಬಿದ್ದ ಘಟನೆ ಬುಧವಾರದಂದು ನಡೆದಿದೆ. ಮಂಗಳೂರಿನ ಖಾಸಗಿ ಶಾಲೆಯೊಂದಕ್ಕೆ ಸೇರಿದ ಬಸ್ ಇದಾಗಿದ್ದು ಘಟನೆಯ ಸಂದರ್ಭದಲ್ಲಿ ಬಸ್ಸಿನಲ್ಲಿ 17 ಜನ ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ. ನಗರದ ನಂತೂರು ವೃತ್ತದ ಬಳಿ ಈ ಘಟನೆ ನಡೆದಿದೆ.

Advertisement

ಘಟನೆಯಿಂದಾಗಿ ಬಸ್ಸಿನ ಒಳಗಿದ್ದ ಮಕ್ಕಳು ಭಯಗೊಂಡಿದ್ದರು. ಬಳಿಕ ಮಕ್ಕಳ ಸಹಿತ ಬಸ್ಸಿನಲ್ಲಿದ್ದವರನ್ನು ಸುರಕ್ಷಿತವಾಗಿ ಇಳಿಸಿ ಬದಲೀ ವ್ಯವಸ್ಥೆಯ ಮೂಲಕ ಶಾಲೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.

ಡಿಸಿಪಿ ಸಹಿತ ಇತರೇ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಈ ಬಸ್ಸಿನಲ್ಲಿ ಸಂಚರಿಸುತ್ತಿದ್ದ ಶಾಲಾ ಮಕ್ಕಳ ಸಹಿತ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿಯನ್ನು ಸಂಬಂಧಿತ ಶಾಲೆಯ ಪ್ರಾಂಶುಪಾಲರು ತನಗೆ ನೀಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರಾಗಿರುವ ಪಿ.ಎಸ್. ಹರ್ಷ ಅವರು ತಿಳಿಸಿದ್ದಾರೆ.



Advertisement

Udayavani is now on Telegram. Click here to join our channel and stay updated with the latest news.

Next