Advertisement

ಚಿಕ್ಕಮಗಳೂರು: ಪಿಎಸ್ಐ ವಿರುದ್ಧ ಹಲ್ಲೆ ಆರೋಪ; ಸ್ಥಳೀಯರಿಂದ ಪ್ರತಿಭಟನೆ

04:47 PM Dec 25, 2020 | Adarsha |

ಚಿಕ್ಕಮಗಳೂರು: ಪಿಎಸ್ಐ ಹರೀಶ್ ನಾಯ್ಕ್ ಅವರು ಸ್ಥಳೀಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಿಸಿ, ಸಖರಾಯಪಟ್ಟಣ ಪೊಲೀಸ್ ಠಾಣೆ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ.

Advertisement

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಡಣದಲ್ಲಿ ಘಟನೆ ನಡೆದಿದ್ದು, ಗುರುವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಪಿಎಸ್ಐ ಹರೀಶ್ ನಾಯ್ಕ್ ಅವರು ದಿನೇಶ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಸಚಿವರ ಕ್ಷೇತ್ರದಲ್ಲಿ ರಂಗೇರಿದ ಹಳ್ಳಿ ಕದನ

ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿಮನೆ ಸತೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು,  ಹಲ್ಲೆ ಖಂಡಿಸಿ ಪಿಎಸ್ಐ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿದೆ. ಸಖರಾಯಪಟ್ಟಣ ಗ್ರಾಮವನ್ನು ಸಂಪೂರ್ಣ ಬಂದ್ ಮಾಡುವ ಮೂಲಕ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next