Advertisement

ಪಿಎಸ್‌ಐ ಪರೀಕ್ಷೆ ಅಕ್ರಮ: ಮತ್ತೊಬ್ಬ ಅಭ್ಯರ್ಥಿ ಸೆರೆ

09:52 PM Sep 06, 2022 | Team Udayavani |

ಬೆಂಗಳೂರು: ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಮತ್ತೂಬ್ಬ ಅಭ್ಯರ್ಥಿಯನ್ನು ಮಂಗಳವಾರ ಬಂಧಿಸಿದ್ದಾರೆ.

Advertisement

ಜೆ.ಪಿ. ನಗರದ ಮಾರೇನಹಳ್ಳಿ ನಿವಾಸಿ ಮನೋಜ್‌ ಬಂಧಿತ ಅಭ್ಯರ್ಥಿ. ಪಿಎಸ್‌ಐ ನೇಮಕಾತಿ ಆಯ್ಕೆ ಪಟ್ಟಿಯಲ್ಲಿ ಆರೋಪಿ 46ನೇ ರ್‍ಯಾಂಕ್‌ ಪಡೆದುಕೊಂಡಿದ್ದ. ಈತನ ಒಎಂಆರ್‌ ಪ್ರತಿ ಪರಿಶೀಲಿಸಿದಾಗ, ಅಕ್ರಮ ಎಸಗಿದ್ದು ಪತ್ತೆಯಾಗಿದೆ. ಅಲ್ಲದೆ, ಈತನ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಆರೋಪಿ ನಾಪತ್ತೆಯಾಗಿದ್ದ.

ಐದಾರು ಬಾರಿ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಈತನ ವಿರುದ್ಧ ಕೋರ್ಟ್‌ ಜಾಮೀನು ರಹಿತ ವಾರಂಟ್‌ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಮಂಗಳವಾರ ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಸಿಐಡಿ ಪೊಲೀಸರು ಹೇಳಿದರು. ಪ್ರಕರಣ ಸಂಬಂಧ ಈಗಾಗಲೇ 22ಕ್ಕೂ ಅಧಿಕ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next