Advertisement

ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕರಣ: ಮತ್ತೊಬ್ಬ ಆರೋಪಿ 10 ದಿನ ಕಸ್ಟಡಿಗೆ

10:44 PM Sep 17, 2022 | Team Udayavani |

ಬೆಂಗಳೂರು: ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕರಣದ 36ನೇ ಆರೋಪಿಯಾಗಿರುವ ಸಿದ್ದರಾಜು ಕೋರ್ಟ್‌ಗೆ ಶರಣಾಗಿದ್ದು, ಸಿಐಡಿ ಪೊಲೀಸರು 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Advertisement

ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಸಿದ್ದರಾಜು, ಪಿಎಸ್‌ಐ ಆಯ್ಕೆ ಪಟ್ಟಿಯಲ್ಲಿದ್ದ ಗಜೇಂದ್ರ, ಮನೋಜ್‌ಗೆ ಮಧ್ಯವರ್ತಿಯಾಗಿದ್ದ. ರಿಯಲ್‌ ಎಸ್ಟೇಟ್‌ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಈತನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ. ಹೀಗಾಗಿ ಈತನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಿಐಡಿ ಅಧಿಕಾರಿಗಳು ಕೋರ್ಟ್‌ ಮೊರೆ ಹೋಗಿದ್ದರು.

ಕೋರ್ಟ್‌ ಕೂಡ ಮುಟ್ಟುಗೋಲು ಹಾಕಿಕೊಳ್ಳಲು ಸೂಚನೆ ನೀಡಿತ್ತು. ಜತೆಗೆ ಜಾಮೀನು ರಹಿತ ವಾರೆಟ್‌ ಹೊರಡಿಸಿತ್ತು. ಈ ಬೆನ್ನಲ್ಲೇ ಆರೋಪಿ ಶುಕ್ರವಾರ ಕೋರ್ಟ್‌ ಎದುರು ಶರಣಾಗಿದ್ದಾನೆ.

ಹೀಗಾಗಿ ಶನಿವಾರ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಸಿಐಡಿ ಪೊಲೀಸರು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next