Advertisement

ಪಿಎಸ್‌ಐ ಅಕ್ರಮ: ಇನ್‌ಸ್ಪೆಕ್ಟರ್‌ ಸೇರಿ ಇಬ್ಬರ ಬಂಧನ

10:22 AM May 17, 2022 | Team Udayavani |

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ನೇಮಕಾತಿ ವಿಭಾಗದ ಮತ್ತೋರ್ವ ಇನ್ಸ್‌ಪೆಕ್ಟರ್‌ ಸೇರಿ ಇಬ್ಬರನ್ನು ಸಿಐಡಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

Advertisement

ಬೆಂಗಳೂರು ಸಿಎಆರ್‌ ವಿಭಾಗದಲ್ಲಿ ಇನ್‌ಸ್ಪೆಕ್ಟರ್‌ ಆಗಿದ್ದ ಜಿ.ಬಸವರಾಜು ಮತ್ತು ಪಿಎಸ್‌ಐ ಪರೀಕ್ಷೆಯ ಅಭ್ಯರ್ಥಿ ಸಿ.ಎಂ.ನಾರಾಯಣನನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಿ ಇಬ್ಬರನ್ನು ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ.

ಇದನ್ನೂ ಓದಿ: ಬೇಲ್‌ಗೆ ಕುಟುಂಬ ಸಹಕರಿಸದಿದ್ದಕ್ಕೆ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಇನ್‌ಸ್ಪೆಕ್ಟರ್‌ ಜಿ.ಬಸವರಾಜು ಈಗಾಗಲೇ ಬಂಧನಕ್ಕೊಳಗಾದ ಡಿವೈಎಸ್ಪಿ ಶಾಂತಕುಮಾರ್‌ ಸೂಚನೆ ಮೇರೆಗೆ ಕೆಲ ಅಭ್ಯರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣಗೊಳಿಸುವುದಾಗಿ ಭರವಸೆ ನೀಡಿ ಹಣ ಪಡೆದುಕೊಂಡಿದ್ದರು ಎಂದು ಸಿಐಡಿ ಮೂಲಗಳು ತಿಳಿಸಿವೆ.

ಇನ್ನು ಸಿ.ಎಂ.ನಾರಾಯಣ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಷ್ಟು ದಿನಗಳ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಈತನ ಸಹೋದರ ಸಿ.ಎಂ. ನಾಗರಾಜ್‌ನ್ನು ಕೆಲ ದಿನಗಳ ಹಿಂದಷ್ಟೇ ಪೊಲೀಸರು ಬಂಧಿಸಿದ್ದರು

Advertisement
Advertisement

Udayavani is now on Telegram. Click here to join our channel and stay updated with the latest news.

Next