Advertisement

ಪಿಎಸ್‌ಐ ಅಕ್ರಮ: ಸರಕಾರಕ್ಕೆ ನೋಟಿಸ್‌

10:48 PM Feb 02, 2023 | Team Udayavani |

ಬೆಂಗಳೂರು: ಭಾರೀ ಸಂಚಲನ ಉಂಟು ಮಾಡಿದ್ದ  ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌’ (ಪಿಎಸ್‌ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಈವರೆಗೆ ದಾಖಲಾಗಿರುವ ಎಫ್ಐಆರ್‌ ಮತ್ತು ದೂರುಗಳ ತನಿಖಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸು ವಂತೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ಸಿಐಡಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ವಿಚಾರವಾಗಿ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಿರಿಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಹಾಗೂ ನ್ಯಾ| ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ಕೆಲವು ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ನೇಮಕಾತಿ ವಿಭಾಗದ ಎಡಿಜಿಪಿ ಹಾಗೂ ಸಿಐಡಿಗೆ ನೋಟಿಸ್‌ ಜಾರಿಗೊಳಿಸಲು ಆದೇ ಶಿಸಿ, ಪ್ರಕರಣದ ಬಗ್ಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಿತು.

ಅಲ್ಲದೆ, ಪಿಎಸ್‌ಐ ನೇಮ ಕಾತಿ ಹಗರಣ ಮತ್ತು ದಾಖ ಲಾದ ಪ್ರಕರಣಗಳಿಂದ ಸಂಬಂಧಿಸಿದ ಈವರೆಗಿನ ವಸ್ತುಸ್ಥಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆಯೂ ನ್ಯಾಯಪೀಠ ಸೂಚಿಸಿತು. ಅರ್ಜಿದಾರರ ಪರ ವಕೀಲ ಅಭಿಷೇಕ್‌ ಕುಮಾರ್‌ ವಾದ ಮಂಡಿಸಿದರು.

 ಅರ್ಜಿದಾರರ ಮನವಿ :

Advertisement

ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ ವಿವಿಧೆಡೆ ದಾಖಲಾಗಿರುವ ಎಫ್ಐಆರ್‌ ಮತ್ತು ದೂರುಗಳಿಗೆ ಸಂಬಂಧಿಸಿದ ಸಂಪೂರ್ಣ ತನಿಖಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಿಐಡಿಗೆ ಆದೇಶಿಸಬೇಕು. ಪ್ರಕರಣದ ತನಿಖೆ ನಡೆಸಿರುವ ಸಿಐಡಿಗೆ ಪೊಲೀಸ್‌ ನೇಮಕಾತಿ ವಿಭಾ

ಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪೌಲ್‌ ಬಂಧನದ ಬಳಿಕದ ಸ್ಥಿತಿಗತಿಯ ಕುರಿತು ಮಾಹಿತಿ ನೀಡಲು ನಿರ್ದೇಶಿಸಬೇಕು. ನ್ಯಾಯಯುತ, ಸ್ವಾತಂತ್ರ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಲು ರಾಜ್ಯ ಸರಕಾರ ಮತ್ತು ಸಿಐಡಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next