Advertisement

PSI Parashuram case; ತನಿಖೆಗಾಗಿ ಯಾದಗಿರಿಗೆ ಬಂದ ಸಿಐಡಿ ತಂಡ

04:01 PM Aug 04, 2024 | Team Udayavani |

ಯಾದಗಿರಿ: ಯಾದಗಿರಿ ನಗರ ಪೊಲೀಸ್ ಠಾಣೆ ಪಿಎಸ್ಐ ಪರಶುರಾಮ ಸಾವಿನ ಪ್ರಕರಣವನ್ನು ಬೆನ್ನು ಹತ್ತಿದ ಸಿಐಡಿ‌ ತಂಡ ಯಾದಗಿರಿ ನಗರದ ಸಿಐಡಿ ಕಚೇರಿಗೆ ಆಗಮಿಸಿದೆ.

Advertisement

ಸಿಐಡಿ ಡಿವೈಎಸ್ಪಿ ಪುನೀತ್ ನೇತೃತ್ವದ ತಂಡ ಯಾದಗಿರಿ ನಗರಕ್ಕೆ ಆಗಮಿಸಿದ್ದು, ಸಾವಿನ ಪ್ರಕರಣ ತನಿಖೆ ಚುರುಕುಗೊಳಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸುನೀಲ್ ಮೂಲಿಮನಿ ಹಾಗೂ ಪಿಎಸ್.ಐ ಹಣಮಂತ ಬಂಕಲಗಿ ಅವರು ಸಿಐಡಿ‌ ಅಧಿಕಾರಿಗಳಿಗೆ ಸಾಥ್ ನೀಡಿದ್ದು, ತನಿಖೆ ವಿಚಾರವಾಗಿ ಅನೇಕ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.

ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರ ವಿರುದ್ಧ ಪಿಎಸ್.ಐ ಪರಶುರಾಮ ಪತ್ನಿ ಶ್ವೇತಾ ಅವರು ದೂರು  ನೀಡಿದ್ದರು, ಪ್ರಕರಣ ತೀವ್ರತೆ ಅರಿತ ರಾಜ್ಯ ಸರ್ಕಾರ ಶನಿವಾರ ಸಿಐಡಿಗೆ ವಹಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next