Advertisement

ಪಿಎಸ್‌ಐ ನೇಮಕಾತಿ ವಯೋಮಿತಿ ಹೆಚ್ಚಳದಿಂದ ಕಲ್ಯಾಣಕ್ಕೆ ಅನುಕೂಲ

07:02 AM May 29, 2020 | Suhan S |

ಕಲಬುರಗಿ: ಪಿಎಸ್‌ಐ ನೇಮಕಾತಿ ವಯೋಮಿತಿಯನ್ನು ರಾಜ್ಯ ಸರ್ಕಾರ ಹೆಚ್ಚಳಗೊಳಿಸಿರುವ ನಿರ್ಧಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಅನುಕೂಲವಾಗಲಿದೆ.

Advertisement

ಸಾಮಾನ್ಯ ವರ್ಗಕ್ಕೆ ಈಗಿರುವ 28 ವರ್ಷ ವಯಸ್ಸಿನ ಮಿತಿಯನ್ನು 30 ವರ್ಷಕ್ಕೆ ಹಾಗೂ ಹಿಂದುಳಿದ ವರ್ಗ ಮತ್ತು ಎಸ್ಸಿ, ಎಸ್ಟಿ ಪ್ರವರ್ಗದ 32 ವರ್ಷಕ್ಕೆ ಹೆಚ್ಚಳ ಮಾಡಿರುವುದು ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ಸಹಕಾರಿಯಾಗಲಿದೆ. ರಾಜ್ಯದ ಪೊಲೀಸ್‌ ಇತಿಹಾಸದಲ್ಲಿ 556 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ 125 ಹುದ್ದೆಗಳು ಮೀಸಲಿವೆ. ಉಳಿದಂತೆ 431 ಹುದ್ದೆಗಳಲ್ಲಿ ಶೇ. 8ರ ಹುದ್ದೆಗಳು ಸಹ ಈ ಭಾಗಕ್ಕೆ ಸಿಗಲಿವೆ. ಸರ್ಕಾರದ ನಿರ್ಧಾರವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿ.ಪಂ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ ಮುಂತಾದವರು ಸ್ವಾಗತಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next