Advertisement

ಪಿಎಸ್‌ಐ ಪರೀಕ್ಷೆ ಅಕ್ರಮ ವಿಚಾರಣೆಗೆ ಹಾಜರಾಗಿ ; ಪ್ರಿಯಾಂಕ್‌ ಖರ್ಗೆಗೆ ನೋಟಿಸ್‌

08:52 AM Apr 25, 2022 | Team Udayavani |

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸಿಐಡಿ ವಿಶೇಷ ಘಟಕ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ರವಿವಾರ ನೋಟಿಸ್‌ ಜಾರಿ ಮಾಡಿದೆ. ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಎ. 25ರಂದು ಸೂಕ್ತ ದಾಖಲಾತಿಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

Advertisement

545 ಪಿಎಸ್‌ಐ (ಸಿವಿಲ್‌) ಅಕ್ರಮ ನೇಮಕಾತಿ ಹಗಣಕ್ಕೆ ಸಂಬಂಧಿಸಿದಂತೆ ತಾವು ತಮ್ಮ ಬಳಿಯಿರುವ ದಾಖಲಾತಿಗಳನ್ನು ಮಾಧ್ಯಮಗಳಿಗೆ ನೀಡಿದ್ದೀರಿ. ಈ ಪ್ರಕರಣ ಸೂಕ್ಷ್ಮ ಹಾಗೂ ಗಂಭೀರವಾಗಿದ್ದು, ಲಭ್ಯವಿರುವ ಎಲ್ಲ ದಾಖಲಾತಿಗಳನ್ನು ಸಂಗ್ರಹಿಸಿ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ತಾವು ತಮ್ಮಲ್ಲಿರುವ ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಸೋಮವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿಯ ಹಿರಿಯ ಪೊಲೀಸ್‌ ಅಧಿಕಾರಿ ನರಸಿಂಹಮೂರ್ತಿ ಪಿ. ಅವರು ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next