Advertisement

ಪಿಎಸ್ಐ ಅಕ್ರಮ: ಬಿಜೆಪಿ ಶಾಸಕ ದಡೇಸೂಗೂರು ವಿರುದ್ಧ ತನಿಖೆಯ ಸುಳಿವು ನೀಡಿದ ಸಿಎಂ

12:31 PM Sep 06, 2022 | Team Udayavani |

ಬೆಂಗಳೂರು: ಪಿಎಸ್ ಐ ಅಕ್ರಮ ನೇಮಕಾತಿ ವಿಚಾರವಾಗಿ ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಡೇಸೂಗೂರು ವಿರುದ್ಧ 15 ಲಕ್ಷ ರೂ ಪಡೆದ ಆರೋಪ ಸಂಬಂಧಿಸಿದಂತೆ ತನಿಖೆ ನಡೆಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಈಗಾಗಲೇ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಹೊಸದಾಗಿ ಬರುವ ಆರೋಪ ವಿಚಾರಗಳನ್ನು ತನಿಖೆಗೆ ಒಳಪಡಿಸಲಾಗುತ್ತದೆ. ಯಾರ ಮೇಲೆ ಆರೋಪ ಬಂದರೂ ತನಿಖೆ‌ ಮಾಡಲಾಗುತ್ತದೆ ಎಂದರು.

ಪಿಎಸ್ಐ ನೇಮಕಾತಿ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ 15 ಲಕ್ಷ ರೂ ಪಡೆದ ಬಗ್ಗೆ ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಡೇಸೂಗೂರು ಅವರದೆನ್ನಲಾದ ವಿಡಿಯೋ ವೈರಲ್ ಆಗಿತ್ತು. ಅಲ್ಲದೆ ಆಡಿಯೋದಲ್ಲಿನ ಧ್ವನಿ ತಮ್ಮದೇ ಎಂದು ಶಾಸಕ ದಡೇಸೂಗೂರ್ ನಿನ್ನೆಯಷ್ಟೇ ಒಪ್ಪಿಕೊಂಡಿದ್ದರು.

ಇದನ್ನೂ ಓದಿ:ಗದಗದಲ್ಲಿ ಮಳೆಯ ರೌದ್ರನರ್ತನ: ಸಾರ್ವಜನಿಕರು, ರೈತರು ಕಂಗಾಲು; ಮಹಿಳೆ ಬಲಿ

Advertisement

Udayavani is now on Telegram. Click here to join our channel and stay updated with the latest news.

Next