Advertisement

ಪಿಎಸ್‌ಐ ಹಗರಣ: ತನಿಖೆ ಬಳಿಕ ಹೊಸ ನೇಮಕಾತಿ ಇಲ್ಲ: ಪರಮೇಶ್ವರ್‌

10:29 PM Jul 31, 2023 | Team Udayavani |

ತುಮಕೂರು: ಪಿಎಸ್‌ಐ ನೇಮಕಾತಿ ಹಗರಣ ಮುಕ್ತಾಯಗೊಳ್ಳುವವರೆಗೂ ಹೊಸ ನೇಮಕಾತಿ ಸಾಧ್ಯವಿಲ್ಲ. ಹಗರಣದ ತನಿಖೆ ಮುಕ್ತಾಯಗೊಂಡು ಸಮಸ್ಯೆ ಬಗೆಹರಿದ ಬಳಿಕವಷ್ಟೇ ಹೊಸ ನೇಮಕಾತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಹಗರಣದಿಂದ ಬಹಳಷ್ಟು ಮಂದಿಗೆ ತೊಂದರೆಯಾಗಿದೆ. ನೇಮಕಾತಿಯೂ ನಿಂತು ಹೋಗಿದೆ. ಎಲ್ಲವೂ ಸರಿ ಹೋಗಿದ್ದರೆ 545 ಮಂದಿ ಪಿಎಸ್‌ಐಗಳ ನೇಮಕಾತಿಯಾಗಬೇಕಾಗಿತ್ತು, ಈಗ ಮತ್ತೆ ಗೃಹ ಇಲಾಖೆ 400 ಮಂದಿ ಪಿಎಸ್‌ಐಗಳ ನೇಮಕ ಮಾಡಿಕೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದೆ. ಈ ಎರಡೂ ಸೇರಿ ಒಟ್ಟು ಸಾವಿರ ಮಂದಿ ಪಿಎಸ್‌ಐಗಳ ನೇಮಕಾತಿ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಹಗರಣದ ತನಿಖೆ ಮುಕ್ತಾಯಗೊಂಡು ಸಮಸ್ಯೆ ಬಗೆಹರಿದ ಬಳಿಕವಷ್ಟೆ ಹೊಸ ನೇಮಕಾತಿ ಮಾಡಬೇಕಾಗಿದೆ. ಆದಷ್ಟು ಶೀಘ್ರ ಇದನ್ನು ಬಗೆಹರಿಸುತ್ತೇವೆ. ಅಭ್ಯರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಕ್ಷಮೆ ಕೇಳುವ ಅಗತ್ಯವಿಲ್ಲ: ಶಾಸಕ ಬಿ.ಆರ್‌. ಪಾಟೀಲ್‌ ಕ್ಷಮೆ ಕೇಳಬೇಕಾಗಿಲ್ಲ, ಕ್ಷಮೆ ಕೇಳಿ ಎಂದು ಯಾರೂ ಹೇಳಿಲ್ಲ. ಬೇರೆ ಉದ್ದೇಶಕ್ಕೆ ನಾವು ಈ ರೀತಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಸಿಎಲ್‌ಪಿ ಸಭೆ ಕರೆಯುವಂತೆ ಶಾಸಕರು ಮನವಿ ಮಾಡಿದ್ದರು. ಅದರಂತೆ ಸಭೆ ಕರೆದು ಚರ್ಚೆ ಮಾಡಲಾಗಿದೆ ಅಷ್ಟೆ. ಈ ಬಗ್ಗೆ ವಿನಾ ಕಾರಣ ಅರ್ಥ ಕಲ್ಪಿಸುವುದು ಅನಗತ್ಯ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next