Advertisement

ಕ್ಷುಲ್ಲಕ ಜಗಳ;ಶಾಲಾ ವಾರ್ಷಿಕೋತ್ಸವಲ್ಲಿ SSLC ವಿದ್ಯಾರ್ಥಿ ಹತ್ಯೆ

06:21 PM Feb 27, 2017 | Team Udayavani |

ಬೆಂಗಳೂರು: ಶಾಲಾ ವಾರ್ಷಿಕೋತ್ಸವದ ವೇಳೆ ನಡೆದ ಕ್ಷುಲ್ಲಕ ಗಲಾಟೆಯಲ್ಲಿ ವಿದ್ಯಾರ್ಥಿಯನ್ನು  ಚೂರಿಯಿಂದ ಇರಿದು ಕೊಂದಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಯಲಹಂಕದ ಸಂಯುಕ್ತ ಸರ್ಕಾರಿ ಶಾಲೆಯ ವಾರ್ಷಿಕೋತ್ಸವದ ವೇಳೆ ಕುಳಿತುಕೊಳ್ಳುವ ವಿಚಾರದಲ್ಲಿ ಗಲಾಟೆ ನಡೆದಾಗ, ಪಿಯು ವಿದ್ಯಾರ್ಥಿಗಳ ಮತ್ತೊಂದು ಗುಂಪು 10ನೇ ತರಗತಿಯ ಹರ್ಷ ಎಂಬಾತನಿಗೆ ಚೂರಿಯಿಂದ ಇರಿದು ಹತ್ಯೆಗೈದಿರುವುದಾಗಿ ವರದಿಯಾಗಿತ್ತು.

ಆದರೆ ಶಾಲಾ ಆವರಣದಲ್ಲಿ ವಿದ್ಯಾರ್ಥಿ ಕೊಲೆ ಆಗಿಲ್ಲ, ಶಾಲಾ ವಾರ್ಷಿಕೋತ್ಸವದ ಬಳಿಕ ಯಾರೋ ದುಷ್ಕರ್ಮಿಗಳು ಕೊಲೆಗೈದಿರಬೇಕೆಂದು ಶಾಲಾ ಉಪಪ್ರಾಂಶುಪಾಲರು ಟಿವಿ9ಗೆ ತಿಳಿಸಿದ್ದಾರೆ.

ಪ್ರಕರಣ ಯಲಹಂಕ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು.  ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next