Advertisement

Manipal ಸಂಭ್ರಮಾಚರಣೆ ನೆಪದಲ್ಲಿ ಸಾರ್ವಜನಿಕರಿಗೆ ಭಂಗ: ಪ್ರಕರಣ ದಾಖಲು

11:02 PM Jan 02, 2024 | Team Udayavani |

ಮಣಿಪಾಲ: ಹೊಸ ವರ್ಷಾಚರಣೆ ಸಂಭ್ರಮದ ನೆಪದಲ್ಲಿ ಅಪಾಯಕಾರಿಯಾಗಿ ವಾಹನ ಚಲಾಯಿಸಿ ಸಾರ್ವಜನಿಕರಿಗೆ ಭಂಗ ಉಂಟುಮಾಡಿದ ಕಾರಣಕ್ಕೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಡಿ.31ರ ರಾತ್ರಿ ಮಣಿಪಾಲ ಠಾಣೆಯ ಪೊಲೀಸ್‌ ಉಪನಿರೀಕ್ಷಕ ರಾಘವೇಂದ್ರ ಸಿ. ಅವರು ಕರ್ತವ್ಯದಲ್ಲಿದ ವೇಳೆ ಮಣಿಪಾಲದ ಸಿಂಡಿಕೇಟ್‌ ಸರ್ಕಲ್‌ – ಕಾಯಿನ್‌ ಸರ್ಕಲ್‌ ನಡುವಿನ ರಸ್ತೆಯಲ್ಲಿ 7 ರಿಂದ 10 ಜನರು ಕಾರು ಹಾಗೂ ದ್ವಿ ಚಕ್ರ ವಾಹನಗಳಲ್ಲಿ ಸವಾರಿ ಮಾಡಿಕೊಂಡು ಅಪಾಯಕಾರಿಯಾಗಿ ಚಾಲನೆ ಮಾಡಿದ್ದಾರೆ.

ಇತರ ವಾಹನಗಳ ಸವಾರರ ಜತೆ ಬಂದು ರಸ್ತೆಯ ಮದ್ಯದಲ್ಲಿ ವಾಹನಗಳನ್ನು ನಿಲ್ಲಿಸಿ ಬೊಬ್ಬೆ ಹಾಕಿ ಕುಣಿದು ಕುಪ್ಪಳಿಸುತ್ತ ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡುವ ಜತೆಗೆ ಸುಗಮ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next