Advertisement
ಕಟಪಾಡಿಯ ಹಳೆ ಎಂಬಿಸಿ ರಸ್ತೆಯಿಂದ ಸಂದಿಸುವ ಸ್ಥಳ ಮತ್ತು ಇಳಿಜಾರಿನಿಂದ ಕೂಡಿದ ಜಂಕ್ಷನ್ ಪ್ರದೇಶ ಇದಾಗಿದ್ದು, ಇಲ್ಲಿ ಬಾಯ್ದೆರೆದಿದ್ದ ಗುಂಡಿಯು ಮೃತ್ಯುಕೂಪವಾಗಿ ಪರಿಣಮಿಸ ಬಲ್ಲುದು ಎಂದು ಉದಯವಾಣಿಯು ಅ. 12ರಂದು ವರದಿಯನ್ನು ಪ್ರಕಟಿಸಿತ್ತು.
Related Articles
Advertisement
ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲೆಂದರಲ್ಲಿ ಹೊಂಡಗುಂಡಿಗಳೇ ತುಂಬಿದೆ. ಪ್ರಮುಖ ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ಮಳೆ ಗಾಳಿ ಎನ್ನದೇ ಸಮರೋಪಾದಿಯಲ್ಲಿ ಸಮರ್ಪಕ ನಿರ್ವಹಣೆಯನ್ನು ಮಾಡಬೇಕಾದ ಇಲಾಖೆಯು ತಮ್ಮ ಜವಾಬ್ದಾರಿಯನ್ನು ಅರಿತು ಸಂಚಾರಕ್ಕೆ ಸುರಕ್ಷತೆಯನ್ನು ಕಲ್ಪಿಸುವಂತೆ ಆಗ್ರಹಿಸುತ್ತಿದ್ದಾರೆ.
ಅಪಾಯ ಕಟ್ಟಿಟ್ಟ ಬುತ್ತಿ ಹೆದ್ದಾರಿ ಸಂಚಾರ ದುಸ್ತರವಾಗಿದೆ. ದ್ವಿಚಕ್ರ ವಾಹನ ಸವಾರರು ಹೆಚ್ಚು ಅಪಾಯಕ್ಕೀಡಾಗುತ್ತಾರೆ. ಲಘು ವಾಹನಗಳಿಗೂ ಅಪಾಯ ಕಟ್ಟಿಟ್ಟ ಬುತ್ತಿ. ವಾಹನ ಸವಾರರು ಈ ಬಗ್ಗೆ ಎಚ್ಚರ ತಪ್ಪಿದಲ್ಲಿ ಅನಾಹುತ ಗ್ಯಾರಂಟಿ. ಅರೆಬರೆಯಾಗಿ ತೇಪೆ ಹಾಕಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಉತ್ತಮ ಗುಣಮಟ್ಟದ ನಿರ್ವಹಣೆ ಅವಶ್ಯಕ.
– ಬಿ.ಸಿ. ರಾಜೇಶ್ ಆಚಾರ್ಯ ಕಟಪಾಡಿ, ನಿತ್ಯ ಸಂಚಾರಿ