Advertisement
ಜಿಲ್ಲಾ ಕೇಂದ್ರ ರಾಮನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಲ್ಲಲ್ಲಿ ಗುಂಡಿಗಳು ಬಿದ್ದು ಹಾಳಾಗಿದ್ದರೂಲೋಕೋಪಯೋಗಿ ಇಲಾಖೆ ಅಧಿಕಾರಿಗಳುಮಾತ್ರ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Related Articles
Advertisement
ಅವೈಜ್ಞಾನಿಕ ರಸ್ತೆ: ರಸ್ತೆಯಲ್ಲಿ ಗುಂಡಿ ಬಿದ್ದಿರುವುದು ಇದೆ ಮೊದಲಲ್ಲ ಈ ಹಿಂದೆಯೂ ಇದೆ ರೀತಿ ಗುಂಡಿಗಳು ಬಿದ್ದು ಲೋಕೋಪಯೋಗಿ ಇಲಾಖೆಅಧಿಕಾರಿಗಳು ತೇಪೆ ಹಚ್ಚಿದ್ದರು. ಆದರೆ ಮಳೆನೀರು ರಸ್ತೆಯಲ್ಲಿ ಶೇಖರಣೆಯಾಗುವುದರಿಂದ ಆಗಾಗ ರಸ್ತೆಯಲ್ಲಿ ಗುಂಡಿಗಳು ಬೀಳುತ್ತಿವೆ. ಮಳೆನೀರು ನಿಲ್ಲದಂತೆ ವೈಜ್ಞಾನಿಕವಾಗಿ ರಸ್ತೆ ನಿರ್ಮಾಣಮಾಡಬೇಕಾದ ಗುತ್ತಿಗೆದಾರ ಅವೈಜ್ಞಾನಿಕ ವಾಗಿಮಳೆ ನೀರು ನಿಲ್ಲುವಂತೆ ರಸ್ತೆ ನಿರ್ಮಾಣಮಾಡಿರುವುದೇ ರಸ್ತೆ ಹಾಳಾಗಲು ಕಾರಣವಾಗಿದೆ ಎಂಬುದು ಸ್ಥಳೀಯರ ಆರೋಪ
ವಾಹನ ಸವಾರರಿಗೆ ಕಿರಿಕಿರಿ: ತಾಲೂಕಿನಿಂದ ರಾಮನಗರ ಜಿಲ್ಲಾಕೇಂದ್ರಕ್ಕೆ ಕಾರ್ಯನಿಮಿತ್ತಗ್ರಾಮೀಣ ಭಾಗದ ರೈತರು ಉದ್ಯೋಗಿಗಳುಪ್ರತಿದಿನ ನೂರಾರು ಪ್ರಯಾಣಿಕರು ಸಂಚಾರ ಮಾಡುತ್ತಾರೆ. ಜಿಲ್ಲಾ ಕೇಂದ್ರಕ್ಕೆ ಹೋಗಬೇಕಾದರೆಇದೇ ರಸ್ತೆಯನ್ನು ಅವಲಂಬಿಸಿದ್ದು ರಸ್ತೆಯಲ್ಲಿ ಗುಂಡಿಬಿದ್ದಿರುವುದು ಪ್ರಯಾಣಿಕರಿಗೆ ಕಿರಿಕಿರಿಉಂಟುಮಾಡಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತಗಮನ ಹರಿಸಿ ಜರೂರಾಗಿ ರಸ್ತೆ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.