Advertisement

ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ ಪ್ರಕಟ

04:37 PM Sep 02, 2019 | Suhan S |

ತುಮಕೂರು: ಜಿಲ್ಲಾದ್ಯಂತ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ, ದೋಷರಹಿತ ಮತದಾರರ ಪಟ್ಟಿ ತಯಾರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ಕುಮಾರ್‌ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪೋಸ್ಟರ್‌ ಬಿಡುಗಡೆ ಮಾಡಿ ಮಾತನಾಡಿದರು.

ಅರ್ಹರು ಮತದಾನದಿಂದ ವಂಚಿತರಾಗದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಬೂತ್‌ ಮಟ್ಟದ ಅಧಿಕಾರಿಗಳು ಕಳುಹಿಸುವ ಪ್ರತಿ ವರದಿ ಕೂಲಂಕಷವಾಗಿ ಪರಿಶೀಲಿಸಿ ತದನಂತರ ಪಟ್ಟಿ ತಯಾ ರಿಸುವಂತೆ ಕಂದಾಯ ನಿರೀಕ್ಷಕರು ಮತ್ತು ಗ್ರಾಮಲೆಕ್ಕಿಗರಿಗೆ ಎಚ್ಚರಿಕೆ ನೀಡಿದರು.

ಬಿಎಲ್ಒಗಳಿಂದ ಪರಿಶೀಲನೆ: ಜಿಲ್ಲಾದ್ಯಂತ ಸೆ.1ರಿಂದ ಅ. 30ರವರೆಗೆ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಈ ವೇಳೆ ಜಿಲ್ಲೆಯ ಪ್ರತಿ ಮತದಾರರ ಮನೆಗೂ ಬಿಎಲ್ಒಗಳು ಹೋಗಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಒಂದು ವೇಳೆ ಬೇರೆ ಕಡೆಗೆ ಕುಟುಂಬ ಬದಲಾಗಿದ್ದರೆ ಅವರಿದ್ದ ಮನೆಗೆ ನೊಟೀಸ್‌ ಅಂಟಿಸಿ ಅದನ್ನು ವಿಡಿಯೋ ಮಾಡಿ ವರದಿ ಸಲ್ಲಿಸಬೇಕು. ಈ ಎಲ್ಲಾ ಪ್ರಕ್ರಿಯೆಗಳ ನಂತರವೇ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಿಗದಿತ ಅರ್ಜಿ ನಮೂನೆ: ಸಮಗ್ರ ಮತದಾರರ ವಿಶೇಷ ಪರಿಷ್ಕರಣೆ ಸಂದರ್ಭ ಅ. 1ಕ್ಕೆ 18 ವರ್ಷ ತುಂಬುವ ಪ್ರತಿ ವ್ಯಕ್ತಿಯೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ತೆಗೆದು ಹಾಕುವುದು, ಹಾಲಿ ಮತದಾರರು ಗುರುತಿನ ಚೀಟಿಯಲ್ಲಿರುವ ಲೋಪದೋಷ ಸರಿಪಡಿಸಿಕೊಳ್ಳಲು, ಮತಗಟ್ಟೆ ಬದಲಾವಣೆಗೆ ಅವಕಾಶವಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ಜೊತೆಗೆ, ಸಾಮಾನ್ಯ ಸೇವಾ ಕೇಂದ್ರ, ಕರ್ನಾಟಕ ಒನ್‌, ಅಟಲ್ ಜನಸ್ನೇಹ ಕೇಂದ್ರ, ಮತಗಟ್ಟೆ ಅಧಿಕಾರಿ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ಪರಿಷ್ಕರಣೆ ಮಾಡ ಬಹುದಾಗಿದೆ. ಈ ವಿಷಯದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ತಪ್ಪು ಮರುಕಳಿಸದಿರಲಿ: ಮುಂದಿನ ವರ್ಷದ ಫೆಬ್ರವರಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬರುವ ಸಾಧ್ಯತೆಯಿದೆ. ಆ ಸಂದರ್ಭ ಈ ವರ್ಷದ ಅಕ್ಟೋಬರ್‌ನಲ್ಲಿ ಪ್ರಕಟಿಸುವ ಕರಡು ಮತದಾರರ ಪಟ್ಟಿಯೇ ಚಲಾವಣೆಗೆ ಬರಲಿದೆ. ಆದ್ದರಿಂದ ಎಚ್ಚರಿಕೆ ಯಿಂದ ಮತದಾರರ ಪಟ್ಟಿ ತಯಾರಿಸಬೇಕು. ಕಳೆದ ಲೋಕಸಭಾ ಚುನಾವಣೆ ಕೊನೆಯ ಕ್ಷಣದಲ್ಲಿ ತುಮ ಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ ಇನ್ನಿ ತರ ಕಡೆ ಪಟ್ಟಿಯಲ್ಲಿ ಹೆಸರಿಲ್ಲದೆ ಕೆಲವರು ಮತ ದಾನದಿಂದ ವಂಚಿತರಾದರು. ಈ ಬಾರಿ ತಪ್ಪು ಮರು ಕಳಿಸದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.

ತಹಶೀಲ್ದಾರ್‌ ಯೋಗಾನಂದ್‌, ಚುನಾವಣಾ ತಹ ಶೀಲ್ದಾರ್‌ ನಾಗಭೂಷಣ್‌, ನರಸಿಂಹರಾಜು, ಶಿರಸ್ತೆ ದಾರ್‌ ಜಯಪ್ರಕಾಶ್‌, ಆರ್‌.ಐ ಶಿವಣ್ಣ, ಗ್ರಾಮ ಲೆಕ್ಕಿ ಗರಾದ ಮುರಳೀಧರ್‌, ಶ್ರೀನಿವಾಸ್‌, ಸ್ವಿಪ್‌ ಕಮಿಟಿ ಸದಸ್ಯರಾದ ಚಂದ್ರಶೇಖರ್‌, ಶ್ರೀನಿವಾಸ್‌ಮೂರ್ತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next