Advertisement

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

12:45 AM Jul 06, 2024 | Team Udayavani |

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಬೊಳ್ಮನಾರು ನಿವಾಸಿ, ಬೆಳ್ತಂಗಡಿಯ ಖಾಸಗಿ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಜು. 3ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

ಬೊಳ್ಮನಾರಿನ ವೆಂಕಟೇಶ್‌ ಅವರ ಪುತ್ರಿ ಅನಿತಾ (17) ಮೃತರು.

ಜೂನ್‌ 29ರಂದು ತಡರಾತ್ರಿ ವಿಷ ಪದಾರ್ಥ ಸೇವಿಸಿದ್ದು, 30ರಂದು ಮುಂಜಾನೆ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಜು. 3ರಂದು ಮೃತಪಟ್ಟರು.

ಡೆತ್‌ನೋಟ್‌ ಪತ್ತೆ
ವಿದ್ಯಾರ್ಥಿನಿ ಎರಡು ಪುಟಗಳ ಡೆತ್‌ನೋಟ್‌ ಬರೆದಿರುವುದು ಪತ್ತೆಯಾಗಿದೆ. 10ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸುವುದು ಸಾಧ್ಯವಾಗಲಿಲ್ಲ. ವೈದ್ಯೆಯಾಗಬೇಕೆಂಬ ಕನಸು ನನ್ನದಾಗಿದ್ದು, ಪಿಯುಸಿಯಲ್ಲಿ ಸೈನ್ಸ್‌ ತೆಗೆದುಕೊಂಡಿದ್ದೆ. ಆದರೆ ಓದುವುದು ಕಷ್ಟವಾಗಿದೆ. ಸೈನ್ಸ್‌ ನನಗೆ ತುಂಬಾ ಕಷ್ಟವಾಗುತ್ತಿದೆ. ನನ್ನ ಸಾವಿಗೆ ನಾನೇ ಕಾರಣ, ಬೇರೆ ಯಾರೂ ಕಾರಣರಲ್ಲ ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next