Advertisement

ಪುಲ್ವಾಮಾ ದಾಳಿಯಲ್ಲಿ ಹುತಾತ್ಮ ಯೋಧನ ಪತ್ನಿ ನಿತಿಕಾ ಕೌಲ್ ಭಾರತೀಯ ಸೇನೆಗೆ ಸೇರ್ಪಡೆ

03:45 PM May 29, 2021 | Team Udayavani |

ನವದೆಹಲಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಮೇಜರ್ ವಿಭೂತಿ ಶಂಕರ್ ಧೌಂಡಿಯಾಲ್ ಅವರ ಪತ್ನಿ ಶನಿವಾರ(ಮೇ 29) ಭಾರತೀಯ ಸೇನೆಗೆ ಯೋಧರಾಗಿ ಸೇರ್ಪಡೆಗೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಕೋವಿಡ್ ಮಾಹಿತಿ ಹೇಳಲು ಹೋದ ಆಶಾ ಕಾರ್ಯಕರ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ ನಿಂದನೆ

2019ರ ಫೆಬ್ರುವರಿಯಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೇಜರ್ ವಿಭೂತಿ ಶಂಕರ್ ಹುತಾತ್ಮರಾಗಿದ್ದರು. ಮೇಜರ್ ಶಂಕರ್ ಅವರ ತ್ಯಾಗಕ್ಕಾಗಿ ಕೇಂದ್ರ ಸರ್ಕಾರ ಮರಣೋತ್ತರ ಶೌರ್ಯ ಚಕ್ರವನ್ನು ನೀಡಿ ಗೌರವಿಸಿತ್ತು.

ಚೆನ್ನೈನ ಸೇನಾ ತರಬೇತಿ ಅಕಾಡೆಮಿಯಲ್ಲಿ ತರಬೇತಿ ಪಡೆದು ಉತ್ತೀರ್ಣಗೊಂಡ ಮೇಜರ್ ಶಂಕರ್ ಪತ್ನಿ ನಿತಿಕಾಕೌಲ್ ಇಂದು ಭಾರತೀಯ ಸೇನೆಗೆ ಲೆಫ್ಟಿನೆಂಟ್ ಆಗಿ ನೇಮಕವಾಗುವ ಮೂಲಕ ಗೌರವ ಸಲ್ಲಿಸಿದ್ದಾರೆ.

Advertisement

” ಹುತಾತ್ಮ ಮೇಜರ್ ಶಂಕರ್ ಅವರ ಪತ್ನಿ ನಿತಿಕಾ ಕೌಲ್ ಗೆ ಉಧಾಂಪುರ್ ಪಿ.ಆರ್.ಒ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಅಭಿನಂದನೆ ತಿಳಿಸಿದೆ. 2019ರಲ್ಲಿ ನಡೆದ ಪುಲ್ವಾಮಾ ದಾಳಿಯಲ್ಲಿ ಮೇಜರ್ ವಿಭೂತಿ ಶಂಕರ್ ದೌಂಡಿಯಾಲ್ ಜೀವ ತೆರುವ ಮೂಲಕ ಹುತಾತ್ಮರಾಗಿದ್ದರು. ಇಂದು ಅವರ ಪತ್ನಿ ನಿತಿಕಾ ಕೌಲ್ ಭಾರತೀಯ ಸೇನೆಗೆ ಸಮವಸ್ತ್ರ ಧರಿಸುವ ಮೂಲಕ ಸೇರ್ಪಡೆಗೊಂಡು ಗೌರವ ಸಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮೇಜರ್ ಧೌಂಡಿಯಾಲ್ ಅವರು ಹುತಾತ್ಮರಾಗುವ ಕೇವಲ ಒಂಬತ್ತು ತಿಂಗಳು ಮೊದಲು ನಿತಿಕಾ ಕೌಲ್ ಅವರನ್ನು ವಿವಾಹವಾಗಿದ್ದರು. ಪತಿ ಹುತಾತ್ಮರಾಗಿ ಆರು ತಿಂಗಳ ನಂತರ ಎಸ್ ಎಸ್ ಸಿಇ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ನಂತರ ಸೇನಾ ತರಬೇತಿ ಪಡೆಯಲು ಆರಂಭಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next