Advertisement

ಪಂಪ್‌ಸೆಟ್‌ಗೆ 7 ಗಂಟೆ ವಿದ್ಯುತ್‌

06:00 AM Nov 24, 2018 | Team Udayavani |

ಮಂಡ್ಯ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಏಳು ಗಂಟೆ ತ್ರೀ-ಫೇಸ್‌ ವಿದ್ಯುತ್‌ ಪೂರೈಸಲು ಬೆಂಗಳೂರಿಗೆ ಹೋದ ಕೂಡಲೇ ಅಧಿಕಾರಿಗಳಿಗೆ ಆದೇಶ ನೀಡುವುದಾಗಿ ಇಂಧನ ಖಾತೆಯನ್ನೂ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. 

Advertisement

ಹೀಗಾಗಿ ಶನಿವಾರವೇ ಈ ಬಗ್ಗೆ ಆದೇಶ ಹೊರಬೀಳುವ ಸಾಧ್ಯತೆ ಇದೆ. ಶಿವಳ್ಳಿ ಬಸ್‌ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ್ದ ವೇಳೆ ರೈತನೊಬ್ಬ ಕೇಳಿದ ಪ್ರಶ್ನೆಗೆ ಮಾತನಾಡಿ, ನೀವು ರಾತ್ರಿ ಸಮಯದಲ್ಲಿ ಜಮೀನುಗಳಿಗೆ ನೀರು ಹಾಯಿಸಲು ಹೋಗಿ ವಿಷಜಂತುಗಳಿಂದ ಕಚ್ಚಿಸಿಕೊಂಡು ಸಾಯುವ ಅಗತ್ಯವಿಲ್ಲ. ಅದಕ್ಕಾಗಿ ಹಗಲು ಸಮಯದಲ್ಲೇ 7 ಗಂಟೆಗಳ ಕಾಲ ವಿದ್ಯುತ್‌ ಪೂರೈಸುವಂತೆ ಅಧಿಕಾರಿಗಳಿಗೆ ಆದೇಶ ನೀಡುತ್ತೇನೆ. ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next