Advertisement

Punjalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

07:55 AM Jul 07, 2024 | Team Udayavani |

ಪುಂಜಾಲಕಟ್ಟೆ: ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳ ಗಡಿ ಪ್ರದೇಶವಾದ ಬೆಂಚಿನಡ್ಕ – ಕಾಜಲ ಪ್ರದೇಶಗಳ ನಡುವೆ ಹರಿಯುವ ಕಿರುಹೊಳೆಗೆ ಕನಿಷ್ಠ ಲಘವಾಹನ ಸಂಚರಿಸಬಹುದಾದ ಸೇತುವೆಯಿಲ್ಲದ ಕಾರಣ ವೃದ್ಧೆ ಯೋರ್ವರ ಶವವನ್ನು ಸ್ಥಳೀಯರು ಕಿಂಡಿ ಅಣೆಕಟ್ಟಿನ ಕಾಲುದಾರಿಯಲ್ಲಿ ಪ್ರಯಾಸಪಟ್ಟು ಹೊತ್ತು ಕೊಂಡು ಬಂದ ದೃಶ್ಯ ಸಾಮಾಜಿಕ ಜಾಲತಾಣ ದಲ್ಲಿ ವೈರಲ್‌ ಆಗಿದೆ.

Advertisement

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಕಾಜಲ ಮತ್ತು ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನಯ ನಾಡು, ಬೆಂಚಿನಡ್ಕ ಪ್ರದೇಶಕ್ಕೆ ಸಂಪರ್ಕ ರಸ್ತೆಯ ಮಧ್ಯೆ ಕಿರುಹೊಳೆ ಹರಿಯುತ್ತಿದ್ದು, ಇದಕ್ಕೊಂದು ಕಿಂಡಿ ಅಣೆಕಟ್ಟು ಸಹಿತ ಲಘುವಾಹನಗಳ ಸಂಚಾರದ ನಿಟ್ಟಿನಲ್ಲಿ ಸೇತುವೆ ನಿರ್ಮಿಸುವಂತೆ ಸ್ಥಳೀಯರು ಜನಪ್ರತಿನಿಧಿಗಳ ಮೂಲಕ ಸರಕಾರಕ್ಕೆ ಸಹಿತ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಇದುವರೆಗೆ ಸೇತುವೆ ನಿರ್ಮಾಣ ಆಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next