Advertisement

ಪುಣೆ ಅಯ್ಯಪ್ಪ ಸ್ವಾಮಿ ಯಕ್ಷಗಾನ ಮಂಡಳಿ: ವಾರ್ಷಿಕೋತ್ಸವ, ಸಮ್ಮಾನ

04:24 PM Sep 23, 2019 | Team Udayavani |

ಪುಣೆ, ಸೆ. 22: ಪುಣೆ ಶ್ರೀ ಅಯ್ಯಪ್ಪ ಸ್ವಾಮಿ ಯಕ್ಷಗಾನ ಮಂಡಳಿ ಪುಣೆ ಇದರ ಮೂರನೇ ವಾರ್ಷಿಕೋತ್ಸವ ಸಮಾರಂಭವು ಸೆ. 15ರಂದು ಪುಣೆ ಕನ್ನಡ ಸಂಘದ ಡಾ|ಶ್ಯಾಮರಾವ್‌ ಕಲ್ಮಾಡಿ ಕನ್ನಡ ಮಾಧ್ಯಮ ಹೈಸ್ಕೂಲ್‌ ಸಭಾಂಗಣದಲ್ಲಿ ನಡೆಯಿತು.

Advertisement

ಸಂಘದ ಗೌರವಾಧ್ಯಕ್ಷ ಮದಂಗಲ್ಲು ಆನಂದ ಭಟ್‌ ಅವರ ಉಪಸ್ಥಿತಿಯಲ್ಲಿ ಅಧ್ಯಕ್ಷರಾದ ಪಾಂಗಾಳ ವಿಶ್ವನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ ಬೆಟ್ಟು, ಗೌರವ ಅತಿಥಿಗಳಾಗಿ ಪಿಂಪ್ರಿ-ಚಿಂಚಾಡ್‌ ಬಂಟರ ಸಂಘದ ಅಧ್ಯಕ್ಷರಾದ ವಿಜಯ್‌ ಎಸ್‌. ಶೆಟ್ಟಿ ಬೋರ್ಕಟ್ಟೆ, ಪುಣೆ ಕನ್ನಡ ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್‌, ಪುಣೆ ತುಳುಕೂಟದ ಗೌರವಾಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು, ಪುಣೆ ತುಳುಕೂಟದ ಅಧ್ಯಕ್ಷ ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಸುಭಾಷ್‌ ಶೆಟ್ಟಿ, ತುಳು ಸಂಘ ಪಿಂಪ್ರಿ ಚಿಂಚಾಡ್‌ ಇದರ ಅಧ್ಯಕ್ಷ ಹರೀಶ್‌ ಶೆಟ್ಟಿ ಕುರ್ಕಾಲ್‌, ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ, ಪುಣೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಹರೀಶ್‌ ಕುಲಾಲ್‌ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ನಿವೃತ್ತ ಭಾರತೀಯ ಯೋಧ ಶ್ಯಾಮರಾಜ್‌ ಇ. ವಿ. ಪುಣೆಯ ಯುವ ಪ್ರತಿಭಾವಂತ ಯಕ್ಷಗಾನ ಕಲಾವಿದ ಸುಕೇಶ್‌ ಶೆಟ್ಟಿ ಎಣ್ಣೆಹೊಳೆ, ಯಕ್ಷಗಾನದ ಬಹುಮುಖ ಪ್ರತಿಭೆ, ಯುವ ತರಬೇತುದಾರ ವಿಕೇಶ್‌ ರೈ ಶೇಣಿ ಇವರನ್ನು ಸಂಘದ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು ಸಮ್ಮಾನಿಸಲಾಯಿತು.

ಗೀತಾ ಡಿ. ಪೂಜಾರಿ, ನವಿತಾ ಎಸ್‌. ಪೂಜಾರಿ, ಸರಸ್ವತಿ ಸಿ. ಕುಲಾಲ್‌ ಪ್ರಾರ್ಥನೆಗೈದರು. ಗೌರವಾಧ್ಯಕ್ಷ ಮದಂಗಲ್ಲು ಆನಂದ ಭಟ್‌ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ವಾಸು ಕುಲಾಲ್‌ ವಿಟ್ಲ, ಮದಂಗಲ್ಲು ಅಶೋಕ್‌ ಭಟ್‌, ಜಗದೀಪ್‌ ಶೆಟ್ಟಿ, ಸುದರ್ಶನ ಪೂಜಾರಿ, ನಯನಾ ಸಿ. ಶೆಟ್ಟಿ, ನಾಗೇಶ್‌ ಕುಲಾಲ್‌ ಕಡಂದಲೆ, ಸುಭಾಷ್‌ ರೈ ಕಾಟುಕುಕ್ಕೆ, ರಮೇಶ್‌ ಶೆಟ್ಟಿ ಎಣ್ಣೆಹೊಳೆ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದರು.

 

Advertisement

ಚಿತ್ರ –ವರದಿ: ಕಿರಣ್‌ ಬಿ. ರೈ ಕರ್ನೂರು

Advertisement

Udayavani is now on Telegram. Click here to join our channel and stay updated with the latest news.

Next