Advertisement

ಪುಣೆ ಬಂಟರ ಸಂಘ: ಶೈಕ್ಷಣಿಕ ಧನ ಸಹಾಯ, ಸಮ್ಮಾನ

03:01 PM Aug 05, 2018 | Team Udayavani |

ಪುಣೆ: ಪುಣೆ ಬಂಟರ ಸಂಘದ ಶಿಕ್ಷಣ ಮತ್ತು ಸಾಮಾಜಿಕ ಸಮಿತಿಯ ಆಶ್ರಯದಲ್ಲಿ ಸಮಾಜ ಬಾಂಧವರ  ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ವಿತರಣಾ ಕಾರ್ಯಕ್ರಮವು  ಜು. 29ರಂದು  ಓಣಿಮಜಲು ಜಗನ್ನಾಥ ಶೆಟ್ಟಿ ಬಂಟರ ಭವನದ ಲತಾ ಸುಧೀರ್‌ ಶೆಟ್ಟಿ ವೇದಿಕೆಯಲ್ಲಿ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement

ಈ ಸಂದರ್ಭ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ   ಭವಾನಿ ಶಿಪ್ಪಿಂಗ್‌ ಇಂಡಿಯಾ ಪ್ರೈವೇಟ್‌  ಲಿಮಿಟೆಡ್‌  ಇದರ ಮುಖ್ಯ ಆಡಳಿತ ನಿರ್ದೇಶಕರಾದ ಕುಸುಮೋಧರ ಡಿ. ಶೆಟ್ಟಿ ಮುಂಬಯಿ, ಗೌರವ ಅತಿಥಿಗಳಾದ  ಪುಣೆ ಸಿಂಬೋಯಾಸಿಸ್‌ ಲಾ ಕಾಲೇಜಿನ ನಿರ್ದೇಶಕಿ ಡಾ| ಶಶಿಕಲಾ ಗುರುಪುರ ಹಾಗೂ ಬಂಟ್ಸ್‌ ಅಸೋಸಿಯೇಶನ್‌ ಪುಣೆ ಇದರ ಅಧ್ಯಕ್ಷರಾದ ನಾರಾಯಣ ಕೆ. ಶೆಟ್ಟಿ ದಂಪತಿಯನ್ನು ಶಾಲು ಹೊದೆಸಿ, ಸ್ಮರಣಿಕೆ, ಪುಷ್ಪಗುತ್ಛವನ್ನಿತ್ತು ಸಂಘದ ವತಿಯಿಂದ ಸಮ್ಮಾನಿಸಲಾಯಿತು.

ವೇದಿಕೆಯಲ್ಲಿ ಸಂಘದ ಗೌರ ವಾಧ್ಯಕ್ಷ ಜಗನ್ನಾಥ ಬಿ. ಶೆಟ್ಟಿ ಓಣಿಮಜಲು, ಉಪಾಧ್ಯಕ್ಷರಾದ ಮಾಧವ ಆರ್‌. ಶೆಟ್ಟಿ, ರಾಮಕೃಷ್ಣ ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್‌ ಕೆ. ಹೆಗ್ಡೆ, ಕೋಶಾಧಿಕಾರಿ ವೈ. ಚಂದ್ರಹಾಸ ಶೆಟ್ಟಿ, ಜತೆ ಕಾರ್ಯದರ್ಶಿ ಸತೀಶ್‌ ಶೆಟ್ಟಿ, ಜತೆ ಕೋಶಾಧಿಕಾರಿ ಶ್ರೀನಿವಾಸ ಶೆಟ್ಟಿ, ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ಶೆಟ್ಟಿ ನಿಟ್ಟೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ವಸಂತ್‌ ಶೆಟ್ಟಿ ಬೈಲೂರು, ಯುವ ವಿಭಾಗದ ಕಾರ್ಯಾಧ್ಯಕ್ಷ ರೋನಕ್‌ ಜಯ ಶೆಟ್ಟಿ ಉಪಸ್ಥಿತರಿದ್ದರು.

ರೇಖಾ ರೈ, ಪ್ರಮೀಳಾ ಶೆಟ್ಟಿ, ಮಮತಾ ಶೆಟ್ಟಿ ಪ್ರಾರ್ಥಿಸಿದರು.  ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾ ಧ್ಯಕ್ಷ  ಚಂದ್ರಶೇಖರ ಶೆಟ್ಟಿ ನಿಟ್ಟೆ ಸ್ವಾಗತಿಸಿದರು.  ಕಾಂತಿ ಸೀತಾರಾಮ ಶೆಟ್ಟಿ ಹಾಗೂ ಸುಲತಾ ಸತೀಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ  ಕಾರ್ಯದರ್ಶಿ ಅಜಿತ್‌ ಕೆ. ಹೆಗ್ಡೆ ವಂದಿಸಿದರು. 

ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

Advertisement
Advertisement

Udayavani is now on Telegram. Click here to join our channel and stay updated with the latest news.

Next