Advertisement

“ಕಾಣದಂತೆ ಮಾಯವಾದನು’ಟ್ರೇಲರ್‌ ಮೆಚ್ಚಿದ ಪುನೀತ್‌

09:29 AM Jul 21, 2019 | Lakshmi GovindaRaj |

ಚಂದ್ರಶೇಖರ್‌ ನಾಯ್ಡು, ಸೋಮ್‌ ಸಿಂಗ್‌ ಹಾಗೂ ಪುಷ್ಪ ಸೋಮ್‌ ಸಿಂಗ್‌ ಅವರು ನಿರ್ಮಿಸಿರುವ “ಕಾಣದಂತೆ ಮಾಯವಾದನು’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರದ ಟ್ರೇಲರ್‌ ವೀಕ್ಷಿಸಿರುವ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

Advertisement

ರಾಜ್‌ ಪ್ರತಿಪಾಠಿ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಪ್ರಥಮಪ್ರತಿ ಸಿದ್ಧವಾಗಿದ್ದು, ಸದ್ಯದಲ್ಲೇ ಸೆನ್ಸಾರ್‌ ಮಂಡಳಿ ಮುಂದೆ ಹೋಗಲಿದೆ. ಈ ಹಿಂದೆ “ಜಯಮ್ಮನ ಮಗ’ ಚಿತ್ರವನ್ನು ನಿರ್ದೇಶಿಸಿದ್ದ ವಿಕಾಸ್‌ ಈ ಚಿತ್ರದ ಮೂಲಕ ನಾಯಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಸಿಂಧು ಲೋಕನಾಥ್‌ ಈ ಚಿತ್ರದ ನಾಯಕಿ.

ಅಚ್ಯುತ್‌ ಕುಮಾರ್‌, ಸುಚೇಂದ್ರ ಪ್ರಸಾದ್‌, ರಾಘವ್‌ ಉದಯ್‌, ಭಜರಂಗಿ ಲೋಕಿ, ಧರ್ಮಣ್ಣ, ಸೀತಾ ಕೋಟೆ, ಬಾಬು ಹಿರಣ್ಣಯ್ಯ, ಹೊನ್ನಾವಳ್ಳಿ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಸುಜ್ಞಾನ್‌ ಅವರ ಛಾಯಾಗ್ರಹಣವಿದೆ. ಸುರೇಶ್‌ ಆರ್ಮುಗಂ ಸಂಕಲನ, ವಿನೋದ್‌ ಸಾಹಸವಿದೆ.

Advertisement

Udayavani is now on Telegram. Click here to join our channel and stay updated with the latest news.

Next