Advertisement

ಶಿರಸಿ: ನ. 28 ಕ್ಕೆ ಅಪ್ಪು ನುಡಿ ನಮನ

05:45 PM Nov 26, 2021 | Team Udayavani |

ಶಿರಸಿ: ಕದಂಬ ಕಲಾ ವೇದಿಕೆ ಶಿರಸಿ, ಶಿರಸಿ ಕರೋಕೆ ಸ್ಟುಡಿಯೊ ಹಾಗೂ ಅರುಣೋದಯ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನ.28 ರಂದು ಸಂಜೆ 5  ಗಂಟೆಯಿಂದ ನಗರದ ಹೊಟೆಲ್ ಸುಪ್ರಿಯಾ ಇಂಟರ್ನ್ಯಾಷನಲ್ ನ ಸಭಾಭವನದಲ್ಲಿ ಮರಣೋತ್ತರ ಕರ್ನಾಟಕ ರತ್ನ ಗೌರವಕ್ಕೆ ಭಾಜನರಾದ ಮರೆಯಲಾಗದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ನಮನ, ‘ಕರ್ನಾಟಕ ರತ್ನ ನುಡಿ ನಮನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Advertisement

ನುಡಿನಮನವನ್ನು ಚಿಂತಕ ಪ್ರೊ. ಕೆ.ಎನ್.ಹೊಸ್ಮನಿ ಹಾಗೂ ಪತ್ರಕರ್ತ ರಾಘವೇಂದ್ರ ಬೆಟ್ಕೊಪ್ಪ ಜಂಟಿಯಾಗಿ ಉದ್ಘಾಟಿಸುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲ, ನೋಟರಿ ಸತೀಶ್ ನಾಯ್ಕ ವಹಿಸುವರು. ಅತಿಥಿಗಳಾಗಿ ಶಿರಸಿ ಶಾಮಿಯಾನ ಡೆಕೋರೇಶನ್ ಸಂಘದ ಅಧ್ಯಕ್ಷ ಕೃಷ್ಣ ಗುಡಿಗಾರ್ ಹಾಗೂ ಕರೋಕೆ ಸ್ಟುಡಿಯೋ, ಕದಂಬ ವೇದಿಕೆಯ ನಿರ್ದೇಶಕಿ ಗೀತಾ ಸಂತೋಷ್ ಭಾಗವಹಿಸಲಿದ್ದಾರೆ. ನಂತರ ಕರೋಕೆ ಕ್ಲಬ್ ಹಾಗೂ ಕದಂಬ ಕಲಾ ವೇದಿಕೆಯ ಗಾಯಕರಿಂದ ಗಾನ ನಮನ ನಡೆಯಲಿದೆ ಎಂದು ಸಂಘಟಕ ಗಾಯಕ ಶಿರಸಿ ರತ್ನಾಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next