Advertisement

ಪುನೀತ್‌, ಸುಧಾಮೂರ್ತಿ, ಯಶ್‌ ದಂಪತಿ ರಾಯಭಾರಿ

10:21 PM Dec 24, 2019 | Lakshmi GovindaRaj |

ಕಾರವಾರ: ಪುಣ್ಯಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ಜರುಗಿಸುವ ಸರ್ಕಾರದ ಯೋಜನೆಗೆ ಇನ್ಫೊಧೀಸಿಸ್‌ ಪ್ರತಿಷ್ಠಾನದ ಸುಧಾಮೂರ್ತಿ, ನಟರಾದ ಪುನೀತ್‌ ರಾಜ್‌ಕುಮಾರ್‌, ಯಶ್‌ ದಂಪತಿ ರಾಯಭಾರಿ ಗಳಾಗಿರುತ್ತಾರೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Advertisement

ಸರ್ಕಾರದ ವತಿಯಿಂದ ಸರಳ, ಸಾಮೂಹಿಕ ವಿವಾಹ ಯೋಜನೆ ಕುರಿತ ಸಿದ್ಧತೆ ಬಗ್ಗೆ ಡೀಸಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ರಾಜ್ಯ ಸರ್ಕಾರದ ಮಹತ್ವದ ಯೋಜನೆ ಇದಾಗಿದ್ದು ಇನ್ಫೊಧೀಸಿಸ್‌ ಪ್ರತಿಷ್ಠಾನದ ಸುಧಾಮೂರ್ತಿ, ನಟರಾದ ಪುನೀತ್‌ ರಾಜ್‌ಕುಮಾರ್‌ ಹಾಗೂ ಯಶ್‌ ದಂಪತಿ ರಾಯಭಾರಿಗಳಾಗಿರುತ್ತಾರೆ.

ಅಲ್ಲದೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಯಡಿಯೂರಪ್ಪ ಸೇರಿ ವಿವಿಧ ಸಚಿವರು, ಮಠಾಧಿಧೀಶರು, ಗಣ್ಯರು ಖುದ್ದು ಈ ವಿವಾಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದರು. ರಾಜ್ಯದಲ್ಲಿ ಹೆಚ್ಚಿನ ಆದಾಯವಿರುವ 16 ಎ ದರ್ಜೆ ದೇವಾಲಯಗಳಲ್ಲಿ ಕಲ್ಯಾಣ ಮಂಟಪ, ಶೌಚಾಲಯ ಸೇರಿ ವಿವಿಧ ಸೌಲಭ್ಯಗಳಿರುವ ದೇವಾಲಯ ಗಳಲ್ಲಿ ಸಾಮೂಹಿಕ ವಿವಾಹ ಜರುಗಲಿದ್ದು,

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ ಮಾರಿಕಾಂಬಾ ದೇವಾಲಯ, ಹೊನ್ನಾವರ ತಾಲೂಕು ಇಡಗುಂಜಿ ವಿನಾಯಕ ದೇಗುಲ ಹಾಗೂ ಭಟ್ಕಳ ತಾಲೂಕು ಶಿರಾಲಿ ಅಳ್ವೆಕೋಡಿ ದುರ್ಗಾ ಪರಮೇಶ್ವರಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸಲು ತೀರ್ಮಾನಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next