Advertisement

ಮಂತ್ರಾಲಯಕ್ಕೆ ಭೇಟಿ ಕೊಟ್ಟ ಪುನೀತ್, ಜಗ್ಗೇಶ್

03:41 PM Apr 05, 2021 | Team Udayavani |

ರಾಯಚೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಸ್ಯಾಂಡಲ್ ವುಡ್ ನಟರಾದ ಪುನೀತ್ ರಾಜ್ ಕುಮಾರ್ ಹಾಗೂ ಜಗ್ಗೇಶ ಭೇಟಿ ನೀಡಿದರು. ರಾಯರ ದರ್ಶನ ಪಡೆದ ಬಳಿಕ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಂದ ಆಶೀರ್ವಾದ ಪಡೆದರು.

Advertisement

ಶ್ರೀಗಳು ಇಬ್ಬರು ನಟರು ಹಾಗೂ ನಿರ್ದೇಶಕ ಸಂತೋಷ ಆನಂದರನ್ನು ಸನ್ಮಾನಿಸಿ ಆಶೀರ್ವದಿಸಿದರು.  ಯುವರತ್ನ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಯರ ಮಠಕ್ಕೆ ಭೇಟಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಜಗ್ಗೇಶ ಕೂಡ ಕಳೆದ ಕೆಲ ವರ್ಷಗಳಿಂದ ತಮ್ಮ ಜನ್ಮದಿನವನ್ನು ರಾಯರ ಮಠದಲ್ಲೇ ಆಚರಿಸಿಕೊಳ್ಳುತ್ತಿದ್ದರು. ಆದರೆ, ಈ ವರ್ಷ ಬಂದಿರಲಿಲ್ಲ. ಹೀಗಾಗಿ ಎಲ್ಲರೂ ಒಟ್ಟಾಗಿ ಬಂದಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next