Advertisement

Puneeth Kerehalli: ಜಾತಿ ನಿಂದನೆ; ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಬಂಧನ

11:12 AM Nov 05, 2023 | Team Udayavani |

ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆ ಕೆರೆಹಳ್ಳಿ ವಿರುದ್ಧ ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್‌ ಕುಮಾರ್‌ ಸಂಪಿಗೆಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು.

ಮತ್ತೆ ಜೈಲು ಸೇರಿದ ಪುನೀತ್‌: ಪುನೀತ್‌ ಕೆರೆಹಳ್ಳಿಯನ್ನು ಇತ್ತೀಚೆಗೆ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಅದನ್ನು ಪ್ರಶ್ನಿಸಿದ ಪುನೀತ್‌ ಹೈಕೋರ್ಟ್‌ ಮೊರೆ ಹೋಗಿದ್ದರು. ಬಳಿಕ ಕೋರ್ಟ್‌ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಸಲಹಾ ಸಮಿತಿರಚಿಸಿತ್ತು. ಆ ನಂತರ ಪುನೀತ್‌ ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ವರದಿಯಲ್ಲಿ ಸಲಹಾ ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೀಗಾಗಿ ಪುನೀತ್‌ ಕೆರೆಹಳ್ಳಿಯನ್ನು ಬಂಧನದಿಂದ ಸರ್ಕಾರ ಮುಕ್ತಗೊಳಿಸಿತ್ತು. ಇದೀಗ ಮತ್ತೂಂದು ಪ್ರಕರಣದಲ್ಲಿ ಜೈಲು ಸೇರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next