Advertisement

#MissYouAppu : ಇಂದು ಪುನೀತ್ ಸಮಾಧಿ ನೋಡಲು ಅಭಿಮಾನಿಗಳಿಗೆ ಅವಕಾಶ

08:35 AM Nov 03, 2021 | Team Udayavani |

ಬೆಂಗಳೂರು : ಇಂದು(ಬುಧವಾರ) ದಿವಂಗತ ನಟ ಪುನೀತ್ ರಾಜ್ ಕುಮಾರ್ ಸಮಾಧಿಯ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇದೇ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಸರ್ಕಾರದ ವತಿಯಿಂದ ಅನುವು ಮಾಡಿಕೊಡಲಾಗಿದೆ.

Advertisement

ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಪ್ಪು ಸಮಾಧಿ ದರ್ಶನ ಪಡೆಯಲು ಅನುವು ಮಾಡಿಕೊಡಲಾಗಿದೆ. ನಿನ್ನೆ ರಾಜ್ ಕುಟುಂಬದಿಂದ ಪುನೀತ್ ರಾಜ್ ಕುಮಾರ್ ಸಮಾಧಿಗೆ ಹಾಲುತುಪ್ಪ ಬಿಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ನೆಚ್ಚಿನ ನಟನ ಸಮಾಧಿಯನ್ನು ನೋಡಲು ರಾಜ್ಯ ನಾನಾ ಭಾಗಗಳಿಂದ ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋ ಕಡೆ ಆಗಮಿಸುತ್ತಿದ್ದಾರೆ. ಅಭಿಮಾನಿಗಳಿಂದ ನೂಕುನುಗ್ಗಲು ಆಗಬಾರದು ಎಂಬ ಕಾರಣಕ್ಕೆ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next