Advertisement

ಪುನೀತ್ ನಿಧನ: ಚಾಮರಾಜನಗರದಲ್ಲಿ ಸ್ವಯಂ ಪ್ರೇರಿತ ಬಂದ್

12:45 PM Oct 30, 2021 | Team Udayavani |

ಚಾಮರಾಜನಗರ: ಅಗಲಿದ ಚಿತ್ರನಟ ಪುನೀತ್ ರಾಜ್ ಕುಮಾರ್ ಗೌರವಾರ್ಥ ಅಭಿಮಾನಿಗಳು ಮನವಿ ಮಾಡಿದ್ದ ಸ್ವಯಂ ಪ್ರೇರಿತ ಚಾಮರಾಜನಗರ ಬಂದ್ ಸಂಪೂರ್ಣ ಯಶಸ್ವಿಯಾಯಿತು.

Advertisement

ತವರು ಜಿಲ್ಲೆಯ ಜನತೆ ಬಂದ್ ನಡೆಸಿ ತಮ್ಮೂರಿನ ಕಲಾವಿದನಿಗೆ ಶ್ರದ್ದಾಂಜಲಿ ಸಲ್ಲಿಸಿದರು.

ನಗರದ ಪ್ರಮುಖ ವಾಣಿಜ್ಯ ವಹಿವಾಟು ಸ್ಥಳವಾದ ದೊಡ್ಡ ಅಂಗಡಿ, ಚಿಕ್ಕಂಗಡಿ ಬೀದಿಯಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.

ಇದನ್ನೂ ಓದಿ:ಇದು ಕರಾಳ ದಿನ: ಪುನೀತ್ ನಿಧನಕ್ಕೆ ಕಂಬನಿ ಮಿಡಿದ ಅಮಿತಾಬ್ ಬಚ್ಚನ್

ಹೋಟೆಲ್ ಗಳು ತೆರೆದಿರಲಿಲ್ಲ. ಚಿತ್ರಮಂದಿರಗಳು ನಿನ್ನೆ ಮಧ್ಯಾಹ್ನದಿಂದಲೇ ಪ್ರದರ್ಶನ ರದ್ದುಗೊಳಿಸಿದ್ದವು. ಬ್ಯಾಂಕ್ ಗಳು ಕಾರ್ಯನಿರ್ವಹಿಸಲಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ಕಡಿಮೆ ಇತ್ತು. ಕೆಲವು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇನ್ನು ಕೆಲವು ಶಾಲಾ ಕಾಲೇಜುಗಳು ತೆರೆದಿದ್ದವು.

Advertisement

ಬಸ್ ಗಳು ಸಂಚರಿಸಿದವು. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಉಳಿದೆಲ್ಲ ವಹಿವಾಟುಗಳು ಬಂದ್ ಆಗಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next