Advertisement

ಹಲ್ಲೆ ಆರೋಪಿಗಳಿಗೆ ಶಿಕ್ಷೆ ವಿಧಿಸಿ

04:57 PM Jul 11, 2020 | Suhan S |

ಭಟ್ಕಳ: ರಾಜ್ಯ ಸರಕಾರಿ ನೌಕರರಿಗೆ ಸೂಕ್ತ ರಕ್ಷಣೆ ಒದಗಿಸುವ ಸಲುವಾಗಿ ಕಠಿಣ ಕಾನೂನು ರಚಿಸಬೇಕು ಎಂದು ಆಗ್ರಹಿಸಿ ಇಲ್ಲಿನ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

Advertisement

ಮನವಿಯಲ್ಲಿ ಬಂಗಾರುಪೇಟೆ ತಹಶೀಲ್ದಾರ್‌ ಹತ್ಯೆಯನ್ನು ಬಲವಾಗಿ ಖಂಡಿಸಿದ್ದು ಈ ರೀತಿಯ ಕ್ರಿಮಿನಲ್‌ ಗಳಿಗೆ ಕಠಿಣ ಸಜೆಯಾಗಬೇಕು. ಸರಕಾರದ ಯೋಜನೆ ಅನುಷ್ಠಾನಗೊಳ್ಳುವ ಸಂದರ್ಭದಲ್ಲಿ ನೌಕರರ ಮೇಲೆ ಇಂತಹ ಕೃತ್ಯ ನಡೆಸುವುದು ಸರಿಯಲ್ಲ. ರಾಜ್ಯದಲ್ಲಿ ನೌಕರರ ಮೇಲೆ ಹಲ್ಲೆ, ಹತ್ಯೆ ಮಾಡಿದವರ ಮೇಲೆ ಕಠಿಣ ಕಾನೂನು ಇಲ್ಲದ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ. ಸರಕಾರಿ ನೌಕರರ ಮೇಲೆ ದೌರ್ಜನ್ಯ, ಹಲ್ಲೆ, ಹತ್ಯೆ ತಡೆಯಲು ಸರಕಾರ ಕಠಿಣ ಕಾನೂನು ಜಾರಿಗೊಳಿಸಬೇಕು. ಸರಕಾರಿ ನೌಕರರು ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ನಿರ್ಮಿಸಬೇಕು. ನೌಕರರು ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಲಸ ಮಾಡುವಾಗ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.

ಮನವಿಯನ್ನು ಸ್ವೀಕರಿಸಿ ತಹಶೀಲ್ದಾರ್‌ ರವಿಚಂದ್ರ ಅವರು ಇಂತಹ ಅಮಾನುಷ ಕೃತ್ಯ ನಡೆಯಬಾರದಿತ್ತು. ತಮ್ಮ ಮನವಿಯನ್ನು ಹಿರಿಯ ಅಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಕಳುಹಿಸುವುದಾಗಿ ತಿಳಿಸಿದರು. ಸರಕಾರಿ ನೌಕರರ ಸಂಘದ ಅಧ್ಯಕ್ಷ ಅನಂತ ಭಟ್ಕಳ, ಉಪಾಧ್ಯಕ್ಷ ಸುಧೀರ ಗಾಂವಕರ, ಪ್ರಧಾನ ಕಾರ್ಯದರ್ಶಿ ಮೋಹನ ನಾಯ್ಕ, ರಾಜ್ಯ ಪರಿಷತ್‌ ಸದಸ್ಯ ಪ್ರಕಾಶ ಶಿರಾಲಿ, ಖಚಾಂಚಿ ವಿದ್ಯಾ ಹೆಗಡೆ ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next