Advertisement

ಬ್ಯಾಂಕ್ ಮ್ಯಾನೇಜರ್ ಎಂದು ಕರೆ ಮಾಡಿ ಸಿಎಂ ಪತ್ನಿಗೆ 23 ಲಕ್ಷ ರೂ. ಪಂಗನಾಮ!

10:02 AM Aug 09, 2019 | Nagendra Trasi |

ಚಂಡೀಗಢ್: ಆನ್ ಲೈನ್ ಶಾಪಿಂಗ್, ಆನ್ ಲೈನ್ ವ್ಯವಹಾರ ಹೆಚ್ಚುತ್ತಿರುವ ನಡುವೆಯೇ ಆನ್ ಲೈನ್ ವಂಚನೆ ಪ್ರಕರಣ ಕೂಡಾ ಅಧಿಕವಾಗತೊಡಗಿದ್ದು, ಅದಕ್ಕೆ ಹೊಸ ಸೇರ್ಪಡೆ ಎಂಬಂತೆ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಪತ್ನಿ, ಸಂಸದೆ ಪ್ರಣೀತ್ ಕೌರ್ ಸೈಬರ್ ವಂಚನೆಗೆ ಒಳಗಾಗಿದ್ದು, ಬರೋಬ್ಬರಿ 23 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

Advertisement

ಕೆಲವು ದಿನಗಳ ಹಿಂದೆ ಲೋಕಸಭೆ ಕಲಾಪದಲ್ಲಿ ಭಾಗವಹಿಸಲು ಕೌರ್ ಆಗಮಿಸಿದ್ದ ವೇಳೆ ಮೊಬೈಲ್ ಕರೆಯೊಂದು ಬಂದಿತ್ತು. ನಾನು ರಾಷ್ಟ್ರೀಕೃತ ಬ್ಯಾಂಕ್ ಮ್ಯಾನೇಜರ್ ಮಾತನಾಡುತ್ತಿದ್ದೇನೆ..ನಿಮ್ಮ ಬ್ಯಾಂಕ್ ಖಾತೆ ವಿವರ ಕೊಡಿ, ಸಂಬಳ ಡೆಪಾಸಿಟ್ ಮಾಡಬೇಕಾಗಿದೆ ಎಂದು ಹೇಳಿದ್ದ!

ಸಂಸದೆ ಕೌರ್ ಅವರ ಬ್ಯಾಂಕ್ ಖಾತೆ ವಿವರ, ಎಟಿಎಂ ಪಿನ್, ಸಿವಿಸಿ ನಂಬರ್ ಜೊತೆಗೆ ಒಟಿಪಿ(ಒನ್ ಟೈಮ್ ಪಾಸ್ ವರ್ಡ್) ಇದರ ಪರಿಣಾಮ ಕೌರ್ ಖಾತೆಯಲ್ಲಿದ್ದ 23 ಲಕ್ಷ ಹಣ ಡ್ರಾ ಮಾಡಿಬಿಟ್ಟಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದರು. ಜಾರ್ಖಂಡ್ ನ ರಾಂಚಿಯಿಂದ ದೂರವಾಣಿ ಕರೆ ಮಾಡಿದ್ದ ಆರೋಪಿ ಈಗ ಪೊಲೀಸರ ಬಂಧನದಲ್ಲಿರುವುದಾಗಿ ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next