Advertisement

Punjab CM ಭಗವಂತ್‌ ಸಿಂಗ್‌ ಮೊಹಾಲಿ ಆಸ್ಪತ್ರೆಗೆ ದಾಖಲು !

01:28 AM Sep 27, 2024 | Team Udayavani |

ಮೊಹಾಲಿ: ಪಂಜಾಜ್‌ ಮುಖ್ಯಮಂತ್ರಿ ಭಗವಂತ್‌ ಸಿಂಗ್‌ ಮಾನ್‌ ಅವರನ್ನು ಮೊಹಾಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅವರ ಕಚೇರಿ ಮಾಹಿತಿ ನೀಡಿದ್ದಾರೆ. ಅಲ್ಲಿ ಅವರಿಗೆ ಕೆಲವೊಂದು ವೈದ್ಯಕೀಯ ಪರೀ­ಕ್ಷೆ­ಗಳನ್ನು ನಡೆಸಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಸರಕಾರದ ವಕ್ತಾರರು ತಿಳಿಸಿ­ದ್ದಾರೆ. ತಡರಾತ್ರಿ ಎಚ್ಚರ ತಪ್ಪಿ ಬಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಕೆಲ ದಿನಗಳ ಹಿಂದಷ್ಟೇ ಮಾನ್‌ ಅವರಿಗೆ ಹೊಸದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸಿಎಂ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಶಿರೋ ಮಣಿ ಅಕಾಲಿ ದಳದ ನಾಯಕ ವಿಕ್ರಂ ಮಜೀತಿಯಾ ಟ್ವೀಟ್‌ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next