Advertisement

ಪಂಜಾಬ್‌: ತೀವ್ರಗೊಂಡ ಪ್ರತಿಭಟನೆ : ಸೆ. 29ರ ವರೆಗೂ ರೈಲು ತಡೆಗೆ ರೈತರ ನಿರ್ಧಾರ

12:37 AM Sep 27, 2020 | sudhir |

ಹೊಸದಿಲ್ಲಿ: ಸಂಸತ್‌ನಲ್ಲಿ ಅಂಗೀಕಾರಗೊಂಡಿರುವ 3 ಕೃಷಿ ಮಸೂದೆಗಳ ವಿರುದ್ಧದ ರೈತರ ಪ್ರತಿಭಟನೆ ಶನಿವಾರವೂ ಮುಂದುವರಿದಿತ್ತು. ಪಂಜಾಬ್‌, ಹರಿಯಾಣ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅನ್ನದಾತರು ರ್ಯಾಲಿ, ಪ್ರತಿಭಟನೆಗಳನ್ನು ಕೈಗೊಂಡಿದ್ದಾರೆ.

Advertisement

ಪಂಜಾಬ್‌ನ ವಿವಿಧ ಭಾಗಗಳಲ್ಲಿ ರೈತ ಸಂಘಟನೆಗಳು ರೈಲು ತಡೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ. ಅಮೃತಸರದಲ್ಲಿ ರೈತರು ತಮ್ಮ ಅಂಗಿಗಳನ್ನು ಬಿಚ್ಚಿ, ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಸೆ.26ರವರೆಗೆ ನಡೆಯಲಿದೆ ಎಂದು ಘೋಷಿಸಲಾಗಿದ್ದ ರೈಲು ತಡೆಯನ್ನು ಸೆ.29ರವ ರೆಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು 28ರಷ್ಟು ರೈಲುಗಳ ಸಂಚಾರವನ್ನು ರೈಲ್ವೇ ಇಲಾಖೆ ರದ್ದುಮಾಡಿದೆ.

ಭತ್ತ ಖರೀದಿ ಪ್ರಕ್ರಿಯೆ ಆರಂಭ
ರೈತರ ಪ್ರತಿಭಟನೆಗಳ ನಡುವೆಯೇ ಪಂಜಾಬ್‌ ಮತ್ತು ಹರಿಯಾಣದಲ್ಲಿ ತತ್‌ಕ್ಷಣವೇ ಭತ್ತ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಕೇಂದ್ರ ಸರಕಾರ ಆದೇಶಿಸಿದೆ. ಬಹುತೇಕ ರಾಜ್ಯಗಳಲ್ಲಿ ಮುಂದಿನ ವಾರ ದಿಂದ ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಆದರೆ, ಈ ಎರಡು ರಾಜ್ಯಗಳಲ್ಲಿ ಶನಿವಾರ ದಿಂದಲೇ ಭತ್ತ ಖರೀದಿ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ ಎಂದು ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ತಿಳಿಸಿದ್ದಾರೆ. ರೈತರಿಗೆ ನೆರವಾಗುವ ಸಲುವಾಗಿ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದೆ ಎಂದೂ ಅವರು ಹೇಳಿದ್ದಾರೆ.

ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸುತ್ತಿರುವವರು ರೈತ ವಿರೋಧಿಗಳು. ರೈತರ ಆದಾಯ ದುಪ್ಪಟ್ಟು ಮಾಡುವ ಆಶ್ವಾಸನೆಯನ್ನು ಪ್ರಧಾನಿ ಮೋದಿ ನೀಡಿದ್ದು, ಅದನ್ನು ಗಮನದಲ್ಲಿಟ್ಟುಕೊಂಡೇ ಈ ಮಸೂದೆ ಅಂಗೀಕರಿಸಲಾಗಿದೆ.
– ಯೋಗಿ ಆದಿತ್ಯನಾಥ್‌, ಉತ್ತರ ಪ್ರದೇಶ ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next