Advertisement

ಪಂಜಾಬ್ – ಚೆನ್ನೈ ಕದನ : ಟಾಸ್ ಗೆದ್ದ ರಾಹುಲ್ ಪಡೆ ಬ್ಯಾಟಿಂಗ್ ಆಯ್ಕೆ

07:05 PM Oct 04, 2020 | Mithun PG |

ದುಬೈ: ಐಪಿಎಲ್ 13ನೇ ಆವೃತ್ತಿಯ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರಾಹುಲ್ ಪಡೆ ಬ್ಯಾಟಿಂಗ್  ಆಯ್ದುಕೊಂಡಿದ್ದಾರೆ.

Advertisement

ಇಂದಿನ ಪಂದ್ಯ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಎಂ ನಲ್ಲಿ ನಡೆಯುತ್ತಿದ್ದು. ಅಂಕಪಟ್ಟಿಯಲ್ಲಿ ಪಂಜಾಬ್ 7ನೇ ಸ್ಥಾನದಲ್ಲಿ ಮತ್ತು ಚೆನ್ನೈ 8 ಸ್ಥಾನದಲ್ಲಿದ್ದು ಇತ್ತಂಡಗಳಿಗೂ ಇಂದು ಗೆಲುವು ಅನಿವಾರ್ಯವಾಗಿದೆ. ಎರಡೂ ತಂಡಗಳೂ ಆಡಿರುವ 4 ಪಂದ್ಯಗಳಲ್ಲಿ ತಲಾ ಒಂದನ್ನು ಗೆದ್ದಿದೆ.

ಚೆನ್ನೈ ಪರ ಡುಪ್ಲೆಸಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಧೋನಿ ಅಬ್ಬರಿಸುವ ತವಕದಲ್ಲಿದ್ದು, ಪಂಜಾಬ್ ಪರ ರಾಹುಲ್ , ಮಯಾಂಕ್ ಅಗರವಾಲ್, ನಿಕೋಲಸ್ ಪೂರನ್  ಉತ್ತಮ ಫಾರ್ಮ್ ನಲ್ಲಿದ್ದಾರೆ.

ಆಡುವ ಹನ್ನೊಂದರ ಬಳಗ:

ಚೆನ್ನೈ ಸೂಪರ್ ಕಿಂಗ್ಸ್ : ಶೇನ್ ವ್ಯಾಟ್ಸನ್, ಅಂಬಾಟಿ ರಾಯುಡು, ಫಾಫ್ ಡು ಪ್ಲೆಸಿಸ್, ಎಂ.ಎಸ್. ಧೋನಿ (ನಾಯಕ), ಕೇದಾರ್ ಜಾಧವ್, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಸ್ಯಾಮ್ ಕರ್ರನ್, ಶಾರ್ದುಲ್ ಠಾಕೂರ್, ಪಿಯೂಷ್ ಚಾವ್ಲಾ, ದೀಪಕ್ ಚಹರ್

Advertisement

ಕಿಂಗ್ಸ್ ಇಲೆವೆನ್ ಪಂಜಾಬ್ : ಕೆ.ಎಲ್. ರಾಹುಲ್ (ನಾಯಕ), ಮಾಯಾಂಕ್ ಅಗರ್ವಾಲ್, ಮಂದೀಪ್ ಸಿಂಗ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ಸರ್ಫರಾಜ್ ಖಾನ್, ಕ್ರಿಸ್ ಜೋರ್ಡಾನ್, ಹರ್ಪ್ರೀತ್ ಬ್ರಾರ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಶೆಲ್ಡನ್ ಕಾಟ್ರೆಲ್

Advertisement

Udayavani is now on Telegram. Click here to join our channel and stay updated with the latest news.

Next